ಇಸಿಸ್ ಸೋಲಿಸಲು ರಾಮ ಮಂದಿರ ನಿರ್ಮಾಣವಾಗಬೇಕು: ಪ್ರವೀಣ್ ತೊಗಾಡಿಯಾ

ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ (ಇಸಿಸ್) ಉಗ್ರ ಸಂಘಟನೆಯನ್ನು ಸೋಲಿಸಬೇಕಾದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಅವರು ಸೋಮವಾರ ಹೇಳಿದ್ದಾರೆ...
ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ (ಸಂಗ್ರಹ ಚಿತ್ರ)
ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ (ಸಂಗ್ರಹ ಚಿತ್ರ)

ಜಬಲ್ಪುರ: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ (ಇಸಿಸ್) ಉಗ್ರ ಸಂಘಟನೆಯನ್ನು ಸೋಲಿಸಬೇಕಾದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂದು ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ಅವರು ಸೋಮವಾರ ಹೇಳಿದ್ದಾರೆ.

ಈ ಕುರಿತಂತೆ ಮಧ್ಯಪ್ರದೇಶದ ಜಬಲ್ ಪುರದಲ್ಲಿ ನಡೆದ ವಿಹೆಚ್ ಪಿಯ ರಾಷ್ಟ್ರೀಯ ಕಾರ್ಯಾಕಾರಿ ಸಭೆಯಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ತನ್ನ ಅಸ್ತಿತ್ವವನ್ನು ಕಂಡುಕೊಳ್ಳಲು ಯತ್ನಿಸುತ್ತಿರುವ ಇಸಿಸ್ ಉಗ್ರ ಸಂಭಟನೆಯನ್ನು ಸೋಲಿಸಬೇಕಾದರೆ ರಾಮ ದೇಗುಲ ನಿರ್ಮಾಣವಾಗಬೇಕಿದೆ ಎಂದು ಹೇಳಿದ್ದಾರೆ.

ರಾಮ ದೇಗುಲ ನಿರ್ಮಾಣದಿಂದ ನಾನು ಇಸಿಸ್ ಉಗ್ರರನ್ನು ಸೋಲಿಸಬಹುದು ಹಾಗೂ ಭಾರತ ಮತ್ತೊಂದು ಸಿರಿಯಾ ಆಗುವುದಿಂದ ತಡೆಯಬಹುದು. ಅಲ್ಲದೆ ಇದರಿಂದ ಆರ್ಥಿಕ ಪ್ರಗತಿಯೂ ಆಗುತ್ತದೆ. ಇತ್ತೀಚಿನ ದಿನಗಳಲ್ಲಿ ಹಿಂದೂಗಳ ತಿರಸ್ಕಾರ ಹೆಚ್ಚಾಗುತ್ತಿದೆ. ಹಿಂದೂಗಳ ಮಾತುಗಳನ್ನು ಯಾರೂ ಕೇಳುತ್ತಿಲ್ಲ. ರಾಮಮಂದಿರ ನಿರ್ಮಾಣ ಕುರಿತಂತೆ ಸಂಸತ್ತಿನಲ್ಲಿ ಕಾನೂನು ಜಾರಿಗೊಳಿಸಬೇಕು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com