ಪ್ರಧಾನಿ ಮನೆ ಮೇಲೆ ಆತ್ಮಾಹುತಿ ದಾಳಿಗೆ ಸಂಚು?

ಭಾರತವನ್ನು ವಿಶ್ವದ ಪ್ರಮುಖ ಶಕ್ತಿ ಕೇಂದ್ರವಾಗಿ ಮಾರ್ಪಾಡು ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಉಗ್ರರು ಹೊಸ ಸಂಚು ರೂಪಿಸಿದ್ದಾರೆ...
ಪ್ರಧಾನಿ ಮನೆ ಮೇಲೆ ಆತ್ಮಾಹುತಿ ದಾಳಿಗೆ ಸಂಚು?
Updated on

ನವದೆಹಲಿ: ಭಾರತವನ್ನು ವಿಶ್ವದ ಪ್ರಮುಖ ಶಕ್ತಿ ಕೇಂದ್ರವಾಗಿ ಮಾರ್ಪಾಡು ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಉಗ್ರರು ಹೊಸ ಸಂಚು ರೂಪಿಸಿದ್ದಾರೆ.

ಈಗ ದೆಹಲಿಯ 7 ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ಅವರ ಅಧಿಕೃತ ನಿವಾಸದ ಮೇಲೆಯೇ ಆತ್ಮಾಹುತಿ ದಾಳಿ ನಡೆಸಲು ಉಗ್ರರು ಸಿದ್ಧತೆ ನಡೆಸುತ್ತಿದ್ದಾರೆ.

ಈ ಸಂಬಂಧ ಕೇಂದ್ರೀಯ ಅರೆಸೇನಾ ಪಡೆ ಹಾಗೂ ದೆಹಲಿ ಪೊಲೀಸರನ್ನು ಕಟ್ಟೆಚ್ಚರದಿಂದಿರುವಂತೆ ಸೂಚಿಸಲಾಗಿದೆ. ಹೀಗಾಗಿ ರಾಜಧಾನಿಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗುಪ್ತಚರ ಮೂಲಗಳ ಪ್ರಕಾರ, ಈ ರೀತಿಯ ದಾಳಿಗಾಗಿ ಈಗಾಗಲೇ ಸಿದ್ಧತೆ ನಡೆದಿದ್ದು, ಕೆಲವು ಉಗ್ರರು ದೆಹಲಿಗೆ ಕಾಲಿಟ್ಟೂ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com