ಪ್ರಧಾನಿ ಮನೆ ಮೇಲೆ ಆತ್ಮಾಹುತಿ ದಾಳಿಗೆ ಸಂಚು?

ಭಾರತವನ್ನು ವಿಶ್ವದ ಪ್ರಮುಖ ಶಕ್ತಿ ಕೇಂದ್ರವಾಗಿ ಮಾರ್ಪಾಡು ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಉಗ್ರರು ಹೊಸ ಸಂಚು ರೂಪಿಸಿದ್ದಾರೆ...
ಪ್ರಧಾನಿ ಮನೆ ಮೇಲೆ ಆತ್ಮಾಹುತಿ ದಾಳಿಗೆ ಸಂಚು?

ನವದೆಹಲಿ: ಭಾರತವನ್ನು ವಿಶ್ವದ ಪ್ರಮುಖ ಶಕ್ತಿ ಕೇಂದ್ರವಾಗಿ ಮಾರ್ಪಾಡು ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಉಗ್ರರು ಹೊಸ ಸಂಚು ರೂಪಿಸಿದ್ದಾರೆ.

ಈಗ ದೆಹಲಿಯ 7 ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ಅವರ ಅಧಿಕೃತ ನಿವಾಸದ ಮೇಲೆಯೇ ಆತ್ಮಾಹುತಿ ದಾಳಿ ನಡೆಸಲು ಉಗ್ರರು ಸಿದ್ಧತೆ ನಡೆಸುತ್ತಿದ್ದಾರೆ.

ಈ ಸಂಬಂಧ ಕೇಂದ್ರೀಯ ಅರೆಸೇನಾ ಪಡೆ ಹಾಗೂ ದೆಹಲಿ ಪೊಲೀಸರನ್ನು ಕಟ್ಟೆಚ್ಚರದಿಂದಿರುವಂತೆ ಸೂಚಿಸಲಾಗಿದೆ. ಹೀಗಾಗಿ ರಾಜಧಾನಿಯ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗುಪ್ತಚರ ಮೂಲಗಳ ಪ್ರಕಾರ, ಈ ರೀತಿಯ ದಾಳಿಗಾಗಿ ಈಗಾಗಲೇ ಸಿದ್ಧತೆ ನಡೆದಿದ್ದು, ಕೆಲವು ಉಗ್ರರು ದೆಹಲಿಗೆ ಕಾಲಿಟ್ಟೂ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com