
ನವದೆಹಲಿ: ಯೋಜನಾ ಆಯೋಗದ ಜಾಗದಲ್ಲಿ ಹೊಸದಾಗಿ ರಚನೆಯಾಗಿರುವ ನೀತಿ ಆಯೋಗದ ಮೊದಲ ಸಭೆ ಶುಕ್ರವಾರ ನವದೆಹಲಿಯಲ್ಲಿ ನಡೆಯಿತು. ಖ್ಯಾತ ಆರ್ಥಿಕ ತಜ್ಞರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ತೈಲ ದರ ಇಳಿಕೆ ಮತ್ತು ಸದ್ಯದ ವಿಶ್ವ ಆರ್ಥಿಕ ಪರಿಸ್ಥಿ ತಿಯ ಸೂಕ್ತ ಲಾಭ ಪಡೆಯುವ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು. ಜತೆಗೆ, ಹೂಡಿಕೆ ದಾರರನ್ನು ವಾಪಸ್ ಕರೆತರುವ ಮತ್ತು ಬೆಳವಣಿ ಗೆ ಆಧರಿತ ಬಜೆಟ್ ಅನ್ನು ರೂಪಿಸಲು ನೆರವು ನೀಡುವಂತೆಯೂ ಆರ್ಥಿಕ ತಜ್ಞರಿಗೆ ಪ್ರಧಾನಿ ಮನವಿ ಮಾಡಿದರು. ಜನರ ನಿರೀಕ್ಷೆ ಗಳನ್ನು ಈಡೇರಿಸಲು ಸದ್ಯದ ವಿಶ್ವ ಆರ್ಥಿಕ ಪರಿಸ್ಥಿತಿಯ ಲಾಭ ಪಡೆದು ದೇಶ ಶೀಘ್ರಗತಿಯಲ್ಲಿ ಬೆಳವಣಿಗೆ ಸಾಧಿಸ ಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದು ಮೋದಿ ಹೇಳಿದ್ದಾರೆ. ಸಭೆ ಕುರಿತು ಮಾಹಿತಿ ನೀಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್ಥಿಕ ಪರಿಸ್ಥಿತಿ ಮತ್ತು ಹೂಡಿಕೆ, ಬೆಳವಣಿಗೆಗೆ ಪೂರಕ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಲಾಯಿತು.
ಇದೇ ವೇಳೆ, ಕೇಂದ್ರ ಬಜೆಟ್ಗೆ ಸಂಬಂಧಿಸಿ ಆರ್ಥಿಕ ತಜ್ಞರಿಂದ ಅಭಿಪ್ರಾಯಗಳನ್ನೂ ಪಡೆಯಲಾಯಿತು ಎಂದು ಹೇಳಿದ್ದಾರೆ. ಇದೇ ವೇಳೆ, ಮೋದಿ ಅವರು ಸಹಕಾರ
ಒಕ್ಕೂಟ ವ್ಯವಸ್ಥೆ ಮತ್ತು ದೇಶದ ಅಭಿವೃದ್ಧಿ ಗಾಗಿ ರಾಜ್ಯಗಳ ನಡುವೆ ಆರೋಗ್ಯಕರ ಸ್ಪರ್ಧೆಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಜತೆಗೆ ಪ್ರಧಾನಮಂತ್ರಿ ಜನಧನ್ ಯೋ ಜನೆ,
ಅಡುಗೆ ಅನಿಲ ಸಬ್ಸಿಡಿ ನೇರ ಗ್ರಾಹಕರ ಖಾತೆಗೆ ಜಮೆ, ಸ್ವಚ್ಛ ಭಾರತದಂಥ ಯೋಜನೆಗಳ ಕುರಿತು ಪ್ರಧಾನಿ ಮಾತನಾಡಿದ್ದಾರೆ. 8ರಂದು ಸಿಎಂಗಳ ಸಭೆ ನೀತಿ ಆಯೋಗದ ಆಡಳಿತ ಸಮಿತಿಯ ಮೊದಲ ಸಭೆ ಭಾನುವಾರ ನಡೆಯಲಿದೆ. ಈ ಸಮಿತಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು ಇದ್ದಾರೆ.
Advertisement