ನವದೆಹಲಿ: ಪರೀಕ್ಷೆಯ ಅನುಭವ ಕುರಿತಂತೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಭಾನುವಾರ ಆಹ್ವಾನ ನೀಡಿದ್ದಾರೆ.
ಮಾ.2 ರಂದು ಕೇಂದ್ರೀಯ ಫ್ರೌಢಶಿಕ್ಷಣ ಮಂಡಳಿ(ಸಿಬಿಎಸ್ಸಿ)ಯ ಪರೀಕ್ಷೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಮಾತನಾಡಿರುವ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು, ಪರೀಕ್ಷೆಯ ತಯಾರಿ ಕುರಿತಂತೆ ಮಕ್ಕಳ ಅನುಭವಗಳನ್ನೇಕೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಬಾರದು ಎಂಬುದರ ಕುರಿತು ಹಲವು ದಿನಗಳಿಂದ ಯೋಚಿಸಿತ್ತಿದ್ದೆ. ಹಾಗಾಗಿ ವಿದ್ಯಾರ್ಥಿಗಳನ್ನು ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇನೆ ಎಂದು ಹೇಳಿದ್ದಾರೆ.
ನಾನು ನನ್ನ ಆಲೋಚನೆಗಳು ಹಾಗೂ ಕೆಲವು ಸ್ವಾರಸ್ಯಕರ ಸಂಗತಿಗಳನ್ನು ಕಾರ್ಯದಲ್ಲಿ ಹಂಚಿಕೊಳ್ಳುತ್ತಿರುತ್ತೇನೆ. ಅನುಭವಗಳನ್ನು ಹಂಚಿಕೊಂಡಾಗ ಯುವಕರಿಗೆ ಸ್ಫೂರ್ತಿ ನೀಡಿದಂತಾಗುತ್ತದ್ದಲ್ಲದೇ, ಪರೀಕ್ಷೆಯ ಸಮಯದಲ್ಲಿ ಅವರಿಗೆ ಪ್ರೇರಣೆ ನೀಡಿದಂತಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಸಹ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಆಹ್ವಾನ ನೀಡಿದ್ದಾರೆ.
Advertisement