ದೆಹಲಿ ಕಾನ್ವೆಂಟ್ ಮೇಲೆ ದುಷ್ಕರ್ಮಿಗಳ ದಾಳಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕ್ರೈಸ್ತ ಸಮುದಾಯದ ಧಾರ್ಮಿಕ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳ ಮೇಲಿನ...
ದೆಹಲಿ ಕಾನ್ವೆಂಟ್ ಮೇಲೆ ದುಷ್ಕರ್ಮಿಗಳ ದಾಳಿ
Updated on

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕ್ರೈಸ್ತ ಸಮುದಾಯದ ಧಾರ್ಮಿಕ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿ ಮುಂದುವರಿದಿದೆ.

ಗುರುವಾರ ರಾತ್ರಿ ದೆಹಲಿಯ ಹೋಲಿ ಚೈಲ್ಡ್ ಆಕ್ಸಿಲಿಯಂ ಶಾಲೆಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಶಾಲೆಯ ಸಿಸಿ ಟಿವಿ ಕ್ಯಾಮೆರಾವನ್ನು ಧ್ವಂಸ ಮಾಡಿ, ಪ್ರಾಂಶುಪಾಲರ ಕಚೇರಿಯಿಂದ ರು. 12 ಸಾವಿರ ನಗದನ್ನು ಕದ್ದಿದ್ದಾರೆ. ಪೊಲೀಸರು ಇದನ್ನು ಕಳ್ಳರ ಕೆಲಸವಿರಬಹುದು ಎಂದು ಹೇಳಿದ್ದರೆ, ರಾಜಕೀಯ ವ್ಯಕ್ತಿಗಳು ಹಾಗೂ ಕ್ರಿಶ್ಚಿಯನ್ ಸಮುದಾಯದ ನಾಯಕರು ಇದನ್ನು ಅಲ್ಲಗಳೆದಿದ್ದಾರೆ.

ತ್ವರಿತ ತನಿಖೆಗೆ ಪ್ರಧಾನಿ ಸೂಚನೆ ಘಟನೆ ದೇಶಾದ್ಯಂತ ತೀವ್ರ ಚರ್ಚೆಗೆ ಗುರಿಯಾಗುತ್ತಿದ್ದಂತೆ ದೆಹಲಿ ಪೊಲೀಸ್ ಮುಖ್ಯಸ್ಥ ಬಿ.ಎಸ್. ಬಸ್ಸಿ ಅವರಿಗೆ ಸಮನ್ಸ್ ಕಳುಹಿಸಿರುವ ಪ್ರಧಾನಿ ಮೋದಿ, ಇಂತಹ ದಾಂದಲೆ ಪ್ರಕರಣಗಳ ಬಗ್ಗೆ ತ್ವರಿತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರನ್ನು ಆದಷ್ಟು ಬೇಗ ಬಂಧಿಸುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com