ನಕ್ಸಲ್ ದಾಳಿ: 2 ಅಧಿಕಾರಿಗಳಿಗೆ ಗಾಯ

ಛತ್ತೀಸ್‌ಗಡದ ಬಿಜಾಪುರದ ಬಳಿ ನಕ್ಸಲರು ನೆಲಬಾಂಬ್ ಸ್ಫೋಟಿಸಿದ ಪರಿಣಾಮ 2 ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...
ಸಾಂದರ್ಬಿಕ ಚಿತ್ರ
ಸಾಂದರ್ಬಿಕ ಚಿತ್ರ

ರಾಯಪುರ: ಛತ್ತೀಸ್‌ಗಡದ ಬಿಜಾಪುರದ ಬಳಿ ನಕ್ಸಲರು ನೆಲಬಾಂಬ್ ಸ್ಫೋಟಿಸಿದ ಪರಿಣಾಮ 2 ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ನಕ್ಸಲ್ ಪೀಡಿತ ಪ್ರದೇಶ ಬಿಜಾಪುರದ ಬಳಿ ನಕ್ಸಲರಿಗಾಗಿ ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ನಕ್ಸಲರು ನೆಲ ಬಾಂಬ್ ಸ್ಫೋಟಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಮುಖ್ಯ ಪೇದೆ ರಾಜೇಶ್ ಹಾಗೂ ಸಹಾಯಕ ಪೇದೆ ಅಶ್ರಮ್ ನೇತಮ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಭದ್ರತಾ ಸಿಬ್ಬಂದಿಗಳು ಗಾಯಗೊಂಡ ಪೊಲೀಸರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com