ಬ್ಯಾಂಕ್ ಮುಷ್ಕರ ಕೈಬಿಡುವಂತೆ ಅರುಣ್ ಜೇಟ್ಲಿ ಮನವಿ

ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ...
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ

ನವದೆಹಲಿ: ಬ್ಯಾಂಕ್ ನೌಕರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕ್ ನೌಕರುಗಳ ಒಕ್ಕೂಟಗಳು ಫೆ.25ರಿಂದ 29ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ. ಈ ಹಿನ್ನಲೆಯಲ್ಲಿ ಮುಷ್ಕರವನ್ನು ಕೈಬಿಡುವಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.

ದೇಶದ ಜನತೆಯ ದೈನಂದಿನ ಬ್ಯಾಂಕಿಂಗ್ ವ್ಯವಹಾರದ ಹಿತದೃಷ್ಟಿಯಿಂದ ಮುಷ್ಕರ ಸೂಕ್ತವಾದುದಲ್ಲ. ಈಗಾಗಲೇ ವೇತನ ಪರಿಷ್ಕರಣೆ ಸಂಬಂಧ ನೌಕರರ ಒಕ್ಕೂಟಗಳು, ಸಂಘಟನೆಗಳ ಜತೆಗೆ ಬ್ಯಾಂಕ್‌ಗಳು ಮಾತುಕತೆ ನಡೆಸುತ್ತಿವೆ. ಬಿಕ್ಕಟ್ಟನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವುದೇ ಉತ್ತಮ ಎಂದು ಜೇಟ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com