ಪ್ರದೀಪ್ ಜೈನ್ ಹತ್ಯೆ ಪ್ರಕರಣ: ಭೂಗತ ಪಾತಕಿ ಅಬು ಸಲೇಂಗೆ ಜೀವಾವಧಿ ಶಿಕ್ಷೆ

ಉದ್ಯಮಿ ಪ್ರದೀಪ್ ಜೈನ್ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಮುಂಬೈ ವಿಶೇಷ ಟಾಡಾ ಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಅಬು ಸೇಲಂ
ಅಬು ಸೇಲಂ
Updated on

ಮುಂಬೈ: ಉದ್ಯಮಿ ಪ್ರದೀಪ್ ಜೈನ್ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಮುಂಬೈ ವಿಶೇಷ ಟಾಡಾ ಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

೧೯೯೫ರಲ್ಲಿ ಮುಂಬೈನ ರಿಯಲ್ ಎಸ್ಟೇಟ್ ಉದ್ಯಮಿ ಪ್ರದೀಪ್ ಜೈನ್ ಅವರ ಕೊಲೆ ಆರೋಪದಲ್ಲಿ, ಭಾರತಕ್ಕ ಗಡಿಪಾರಾಗಿರುವ ಅಬು ಸಲೇಂ ಮತ್ತು ಇನ್ನಿತರ ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರು ಎಂದುಕಳೆದ ಸೋಮವಾರ ತೀರ್ಪು
ನೀಡಿದ್ದ ಟಾಡಾ ಕೋರ್ಟ್, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಪ್ರದೀಪ್ ಜೈನ್ ತಮ್ಮ ಬೃಹತ್ ಬಂಗಲೆಯನ್ನು ತೊರೆಯಲು ನಿರಾಕರಿಸಿದ್ದಕ್ಕೆ ೧೯೯೫ ಮಾರ್ಚ್ ೭ ರಂದು ಅವರ ಜುಹೂ ಬಂಗಲೆ ಹೊರಗೆ ಗುಂಡಿನ ದಾಳಿಗೆ ಆಹುತಿಯಾಗಿದ್ದರು.

೧೯೯೩ರ ಮುಂಬೈ ಸರಣಿ ಬಾಂಬ್ ಸ್ಫೋಟ
ಆರೋಪಿ ಅಬು ಸೇಲಂನನ್ನು ೨೦೦೫, ನವೆಂಬರ್ ೧೧ರಂದು ಪೋರ್ಚುಗಲ್ ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com