ನವದೆಹಲಿ: ಭೂಸ್ವಾಧೀನ ಕಾಯ್ದೆ ಸಂಬಂಧ ಕೇಂದ್ರ ಸರ್ಕಾರ ಜನತೆಯ ಹಾದಿ ತಪ್ಪಿಸುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಬುಧವಾರ ಹೇಳಿದ್ದಾರೆ.
ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ. ಇದೊಂದು ಉತ್ತಮ ಕಾಯ್ದೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದರು.
ಇದನ್ನು ವಿರೋಧಿಸಿರುವ ಅಣ್ಮಾ ಹಜಾರೆ, ಕೇಂದ್ರ ಸರ್ಕಾರ ಜನರಿಗೆ ಸುಳ್ಳು ಮಾಹಿತಿ ನೀಡಿ, ಹಾದಿ ತಪ್ಪಿಸುತ್ತಿದೆ. ಭೂ ಸ್ವಾಧೀನ ಕಾಯ್ದೆ ಸುಗ್ರಿವಾಜ್ಞೆ ಜನವಿರೋಧಿಯಾಗಿದೆ ಎಂದು ತಿಳಿಸಿದ್ದಾರೆ.
ಕಪ್ಪುಹಣ ಪ್ರಕರಣ, ಭೂ ಸ್ವಾಧೀನ ಕಾಯ್ದೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಜನರಿಗೆ ವಂಚಿಸುತ್ತಾ ಬಂದಿದೆ. ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಸುಳ್ಳು ಆಶ್ವಾಸನೆ ನೀಡಿತ್ತು. ಗೆದ್ದ ನಂತರ ನೀಡಿದ ಆಶ್ವಾಸನೆಗಳನ್ನು ಮರೆತಿದೆ. ಕೇವಲ ಮಾತುಗಳಲ್ಲಿ ಹಾಗೆ ಮಾಡುತ್ತೇವೆ ಹೀಗೆ ಮಾಡುತ್ತೇವೆ ಎಂದು ಹೇಳಿ ಜನರ ನಂಬಿಕೆಯನ್ನು ಹುಸಿಗೊಳಿಸುತ್ತಿದೆ ಎಂದು ಅಣ್ಣಾ ದೂರಿದ್ದಾರೆ.
Advertisement