ಮೇಕ್ ಇನ್ ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿ ಅವರ 'ಮೇಕ್ ಇನ್ ಇಂಡಿಯಾ' ಮಾದರಿಯಲ್ಲಿ ಮುಖ್ಯಮಂತ್ರಿ...
ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಜತೆ ಸಿಎಂ ಸಿದ್ದರಾಮಯ್ಯ.
ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಜತೆ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 'ಮೇಕ್ ಇನ್ ಇಂಡಿಯಾ' ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಮೇಕ್ ಇನ್ ಕರ್ನಾಟಕ'ದ ಪ್ರಸ್ತಾಪ ಮಾಡಿದ್ದಾರೆ.

ನಗರದ ಆರ್.ವಿ.ಎಂಜಿನಿಯರಿಂಗ್ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ 'ಮೇಕ್ ಇನ್ ಕರ್ನಾಟಕ'ದ ಬಗ್ಗೆ ಮಾತನಾಡಿದ್ದಾರೆ. ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುವ ಅಗತ್ಯವಿದೆ, ಆ ಮೂಲಕ ಮೇಕ್ ಇನ್ ಕರ್ನಾಟಕ ಮಾಡಬೇಕು. ಅದು ಮುಂದೆ ಮೇಕ್ ಇನ್ ಇಂಡಿಯಾ ಸಾಧಿಸುವುದಕ್ಕೂ ನೆರವಾಗಲಿದೆ ಎಂಬ ಅಭಿಪ್ರಾಯನ್ನು ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಹೇಳಿದ್ದೇನು?


  • ಎಲ್ಲ ರೀತಿಯ ತಂತ್ರಜ್ಞಾನವನ್ನು ಆಮದು ಮಾಡಿಕೊಳ್ಳುವ ಬದಲು ಸಾಧ್ಯವಾದಷ್ಟು ಸ್ಥಳೀಯವಾಗಿಯೇ ಅಭಿವೃದ್ಧಿಪಡಿಸಬೇಕು.
  • ಸ್ಥಳೀಯವಾಗಿ ಅಭಿವೃದ್ಧಿಗೊಳಿಸುವ ಸಾಕಷ್ಟು ಮಾರ್ಗ, ಸಂಪನ್ಮೂಲ ನಮ್ಮಲ್ಲಿವೆ.
  • ಪರಿಣಾಮಕಾರಿಯಾಗಿ ಇ-ಆಡಳಿತ ಬಳಸಿ, ಸುಸ್ಥಿರ ಅಭಿವೃದ್ಧಿಯತ್ತ ಹೆಜ್ಜೆ.
  • ಸೌರಶಕ್ತಿ ಬಳಕೆಗೆ ಆದ್ಯತೆ, ಕಸದಿಂದ ಇಂಧನ ಉತ್ಪಾದನೆ ಮಾಡಬೇಕು.
  • ತ್ಯಾಜ್ಯ ನೀರಿನಿಂದ ವಿದ್ಯುತ್, ಕಟ್ಟಡ ಅವಶೇಷಗಳಿಂದ ವಿವಿಧ ಉತ್ಪನ್ನ ತಯಾರಿಕೆ.
  • ಆಧುನಿಕ ತಂತ್ರಜ್ಞಾನಗಳ ವಿವಿಧ ರೀತಿಯ ಸಂಸ್ಕರಣಾ ಘಟಕಗಳಿಗೆ ಹೆಚ್ಚಿನ ಆದ್ಯತೆ.
  • ನ್ಯಾನೋ ತಂತ್ರಜ್ಞಾನದಿಂದ ರೇಷ್ಮೆ ತ್ಯಾಜ್ಯ ಮರುಬಳಕೆ.
  • ಪ್ಲಾಸ್ಟಿಕ್, ಪೇಪರ್ ಮತ್ತು ಸೆರಾಮಿಕ್‌ಗಳನ್ನು ಪುನರ್ ಬಳಸುವುದು.
  • ಆಹಾರ ಸಂಸ್ಕರಿಸಿ, ಸದ್ಬಳಕೆ ಮಾಡಿಕೊಳ್ಳುವಂಥ ತಂತ್ರಜ್ಞಾನದ ಮೊರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com