ಅಪಘಾತ: ವಿದ್ಯಾರ್ಥಿ ಸಾವು

ಸವಾರನ ನಿಯಂತ್ರಣ ಕಳೆದಕೊಂಡ ಬೈಕ್ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸವಾರನ ನಿಯಂತ್ರಣ ಕಳೆದಕೊಂಡ ಬೈಕ್ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ ಘಟನೆ ಕಂಟೋನ್ಮೆಂಟ್ ರೈಲು ನಿಲ್ದಾಣ ರಸ್ತೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.

ಆರ್.ಟಿ.ನಗರ ನಿವಾಸಿ ಆ್ಯನಿಮೇಷನ್ ವಿದ್ಯಾರ್ಥಿ ಅರುಣ್(22) ಮೃತನು. ಈತನ ಸ್ನೇಹಿತ ಎಂ.ಟೆಕ್ ವ್ಯಾಸಂಗ ಮಾಡುತ್ತಿದ್ದ ಚಿದಾನಂದ್(23) ಎಂಬುವನಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಲಾರ ಮೂಲದ ಇಬ್ಬರು ಆರ್.ಟಿ.ನಗರದಲ್ಲಿ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪರೀಕ್ಷೆ ನಡೆಯುತ್ತಿದ್ದ ಕಾರಣ ರಾತ್ರಿ ಇಡಿ ವ್ಯಾಸಂಗ ಮಾಡುತ್ತಿದ್ದ ಈ ಇಬ್ಬರು, ತಿಂಡಿ ತಿನ್ನಲು ನಸುಕಿನಲ್ಲಿ ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ತೆರಳಿದ್ದರು. ತಿಂಡಿ ಮುಗಿಸಿ ಮರಳುವಾಗ ಚಿದಾನಂತ್, ಸಂಚಾರ ನಿಯಮ ಉಲ್ಲಂಘಿಸಿ ಏಕಮುಖ ರಸ್ತೆಯಲ್ಲಿ ಹೋಗುತ್ತಿದ್ದ.

ಎದುರಿನಿಂದ ಬಂದ ವಾಹನಗಳ್ನು ಕಂಡು ತಬ್ಬಿಬ್ಬಾಗಿದ್ದರಿಂದ ನಿಯಂತ್ರಣ ಕಳೆದುಕೊಂಡು ಬೈಕನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದಿದ್ದಾನೆ. ವೇಗವಾಗಿ ಚಲಿಸುತ್ತಿದ್ದ ಕಾರಣ ಡಿಕ್ಕಿ ರಭಸಕ್ಕೆ ಹಿಂ6ಬದಿ ಕುಳಿತಿದ್ದ ಅರುಣ್, ಮೇಲಕ್ಕೆ ಹಾರಿ ಕೆಳಗೆ ಬಿದ್ದಿದ್ದಾನೆ. ತಲೆಗೆ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸವಾರ ಚಿದಾನಂದ್ ಹೆಲ್ಮೆಟ್ ಧರಿಸದೆ ಇದ್ದ ಕಾರಣ ಆತನಿಗೂ ತಲೆಗೆ ಪೆಟ್ಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈಗ್ರೌಂಡ್ಸ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com