ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಹಾಗೂ ಇತರೆ ಮೂವರ ಅಕ್ರಮ ಆಸ್ತಿ ಗಳಿಗೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಸಹಕರಿಸಲು ಅನುಮತಿ ನೀಡಬೇಕೆಂದು ಕೋರಿ ಡಿಎಂಕೆ ಸಲ್ಲಿಸಿದ್ದ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್ ಎಸ್ಪಿಪಿ ಹಾಗೂ ಜಯಾ ಪರ ವಕೀಲರಿಗೆ ಸೂಚಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಿ.ಆರ್ ಕುಮಾರಸ್ವಾಮಿ ಅವರ ವಿಶೇಷ ನ್ಯಾಯಪೀಠ, ಜ.13ರ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ. ಡಿಎಂಕೆ ನಾಯಕ ಅನ್ಬಳಗನ್, ಪ್ರಾಸಿಕ್ಯೂಷನ್ಗೆ ಸಹಕರಿಸಲು ಅನುಮತಿ ನೀಡಬೇಕೆಂದು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
Advertisement