ದೇಶಪಾಂಡೆ ನಿಯೋಗ ಅಹಮದಾಬಾದ್‌ಗೆ

'ಕರ್ನಾಟಕದ ವಾಣಿಜ್ಯೋದ್ಯಮದಲ್ಲಿ ಬಂಡವಾಳ ಹೂಡಿಕೆ ಅವಕಾಶ' ಕುರಿತ ವಿಚಾರ ಸಂಕಿರಣ...
3 ದಿನಗಳ ಉತ್ಸವದಲ್ಲಿ ಆರ್.ವಿ.ದೇಶಪಾಂಡೆ ಭಾಗಿ
3 ದಿನಗಳ ಉತ್ಸವದಲ್ಲಿ ಆರ್.ವಿ.ದೇಶಪಾಂಡೆ ಭಾಗಿ
Updated on

ಬೆಂಗಳೂರು: ಪ್ರವಾಸಿ ಭಾರತೀಯ ದಿನದ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅವರ ನೇತೃತ್ವದ ನಿಯೋಗ ಗುಜರಾತ್‌ನ ಅಹಮದಾಬಾದ್‌ಗೆ ತೆರಳಿದೆ.

ನಾನಾ ಇಲಾಖೆ ಅಧಿಕಾರಿಗಳು, ಉದ್ಯಮಿಗಳು, ಅನಿವಾಸಿ ಭಾರತೀಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ನಿಯೋಗವು 3 ದಿನಗಳ ಉತ್ಸವದಲ್ಲಿ ಪಾಲ್ಗೊಳ್ಳಲಿದೆ.

ಕರ್ನಾಟಕದಲ್ಲಿನ ಪ್ರವಾಸೋದ್ಯಮ ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಸಚಿವ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ 'ಕರ್ನಾಟಕದ ವಾಣಿಜ್ಯೋದ್ಯಮದಲ್ಲಿ ಬಂಡವಾಳ ಹೂಡಿಕೆ ಅವಕಾಶ' ಕುರಿತ ವಿಚಾರ ಸಂಕಿರಣ ನಡೆಯಲಿದೆ.

ಅನಿವಾಸಿ ಭಾರತೀಯ ವೇದಿಕೆ ಉಪಾಧ್ಯಕ್ಷ ವಿ.ಸಿ.ಪ್ರಕಾಶ್, ಮಣಿಪಾಲ್ ಗ್ಲೋಬಲ್ ಶೈಕ್ಷಣಿಕ ಸಂಸ್ಥೆ ಅಧ್ಯಕ್ಷ ಮೋಹನದಾಸ್ ಪೈ, ಟೊಯೋಟೊ ಕಿರ್ಲೋಸ್ಕರ್ ಉಪಾಧ್ಯಕ್ಷ ಶೇಖರ್ ವಿಶ್ವನಾಥನ್, ಎಕ್ಸ್ ಸಂಸ್ಥೆಯ ಅಧ್ಯಕ್ಷ ಅರವಿಂದ್ ಮೆಳ್ಳಿಗೇರಿ, ಡಾ.ದೇವಿಶೆಟ್ಟಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com