ಸ್ಪೆಕ್ಟ್ರಂ: ಮಿತ್ತಲ್, ರವಿ ರೂಯಿಯಾ ನಿರಾಳ

ಹೆಚ್ಚುವರಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಈ ಇಬ್ಬರೂ ಉದ್ಯಮಿಗಳ ವಿರುದ್ಧ ಸಮನ್ಸ್...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಹೆಚ್ಚುವರಿ ಸ್ಪೆಕ್ಟ್ರಂ ಹಗರಣದಲ್ಲಿ ಆರೋಪಿಗಳಾಗಿರುವ ಭಾರತಿ ಸೆಲ್ಯುಲರ್ ಲಿ.ನ ಸಿಎಂಡಿ ಸುನಿಲ್ ಭಾರ್ತಿ ಮಿತ್ತಲ್ ಮತ್ತು ಎಸ್ಸಾರ್ ಗ್ರೂಪ್‌ನ ಪ್ರವರ್ತಕ ರವಿ ರೂಯಿಯ ಅವರು ಸದ್ಯಕ್ಕೆ ನಿರಾಳರಾಗಿದ್ದಾರೆ.

2002ರ ಎನ್‌ಡಿಎ ಅವಧಿಯ ಹೆಚ್ಚುವರಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಈ ಇಬ್ಬರೂ ಉದ್ಯಮಿಗಳ ವಿರುದ್ಧ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.

ಆದರೆ, ಈ ಕುರಿತು ಉದ್ಯಮಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ವಿಶೇಷ ನ್ಯಾಯಾಲಯದ ಈ ಆದೇಶವನ್ನು ರದ್ದು ಮಾಡಿದೆ.

ಆರೋಪಿಗಳ ವಿರುದ್ಧ ಪುರಾವೆ ಸಿಕ್ಕರೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಿಗೆ ಸಮನ್ಸ್ ಜಾರಿಗೊಳಿಸಲು ಎಲ್ಲ ರೀತಿ ಅಧಿಕಾರ ಇದೆ ಎಂದು ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರನ್ನೊಳಗೊಂಡ ಪೀಠ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com