ಸುನಂದಾ ಪುಷ್ಕರ್ ಪ್ರಕರಣ: ಕಾಂಗ್ರೆಸ್ ಪಾತ್ರವಿಲ್ಲ

ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣ ಶಶಿ ತರೂರ್ ಅವರ...
ಹಿರಿಯ ಕಾಂಗ್ರೆಸ್ ನಾಯಕ ಪಿಸಿ ಚಾಕೋ
ಹಿರಿಯ ಕಾಂಗ್ರೆಸ್ ನಾಯಕ ಪಿಸಿ ಚಾಕೋ
Updated on

ನವದೆಹಲಿ: ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣ ಶಶಿ ತರೂರ್ ಅವರ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದ್ದಾದರಿಂದ ಈ ವಿಚಾರದಲ್ಲಿ ಕಾಂಗ್ರೆಸ್‌ನ ಪಾತ್ರವೇನೂ ಇಲ್ಲ ಎಂದು ಭಾನುವಾರ ಕಾಂಗ್ರೆಸ್ ಹೇಳಿದೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಪಿಸಿ ಚಾಕೋ ಅವರು, ಸುನಂದಾ ಪುಷ್ಕರ್ ಅವರ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಗೆ ಶಶಿ ತರೂರ್ ಸಹಕರಿಸುತ್ತಿದ್ದಾರೆ. ತನಿಖೆ ನಿಧಾನಗತಿಯಲ್ಲಿ ನಡೆಯುತ್ತಿದ್ದರೆ ಇದಕ್ಕೆ ಕಾಂಗ್ರೆಸ್ ಕಾರಣವಲ್ಲ. ಪ್ರಕರಣ ಶಶಿ ತರೂರ್ ಅವರ ವೈಯಕ್ತಿಕ ವಿಚಾರವಾದದ್ದು, ಕಾಂಗ್ರೆಸ್‌ನ ವೈಯಕ್ತಿಕ ವಿಚಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿಯ ಚಾಣಕ್ಯಪುರಿಯ ಲೀಲಾ ಪ್ಯಾಲೆಸ್ ಪಂಚತಾರಾ ಹೊಟೆಲ್‌ನ ರೂಮ್ ನಂ.345ರಲ್ಲಿ ಜನವರಿ 17ರ ರಾತ್ರಿ ಸುನಂದಾ ಪುಷ್ಕರ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com