ಮಕರ ಜ್ಯೋತಿ ದರ್ಶನ ಪಡೆದು ಪುನೀತರಾದ ಭಕ್ತರು

ಪ್ರತಿ ವರ್ಷದಂತೆ ಈ ಬಾರಿಯೂ...
ಮಕರ ಜ್ಯೋತಿ ದರ್ಶನ
ಮಕರ ಜ್ಯೋತಿ ದರ್ಶನ
Updated on

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಪಡೆದ ಅಯ್ಯಪ್ಪ ಸ್ವಾಮಿ ಭಕ್ತರು ಪುನೀತರಾದರು.

ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಸಂಜೆ 6.55ರ ಸುಮಾರಿಗೆ ಜ್ಯೋತಿ ಮೂರು ಬಾರಿ ಕಾಣಿಸಿಕೊಂಡಿತ್ತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಜ್ಯೋತಿಯನ್ನು ಕಣ್ತುಂಬಿಕೊಂಡರು.

ಯಾವುದೇ ಬೇದಭಾವವಿಲ್ಲದೆ ಕಡು ಬಡವರಿಂದ ಶ್ರೀಮಂತರವರೆಗೂ ಪ್ರತಿ ವರ್ಷವೂ ಶಬರಿಮಲೆಗೆ ಭಕ್ತಾದಿಗಳಾಗಿ ಆಗಮಿಸಿ ಅಯ್ಯಪ್ಪ ಸ್ವಾಮಿ ಹಾಗೂ ಜ್ಯೋತಿಯ ದರ್ಶನ ಪಡೆದು ಪುನೀತರಾಗುವರು.

ಲಕ್ಷಾಂತರ ಭಕ್ತರು ಮಕರ ಜ್ಯೋತಿಯಂದು ಶಬರಿಮಲೆಗೆ ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಬಂದೋಬಸ್ತ್ ಹಾಗೂ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಶಬರಿಮಲೆಗೆ ಕೇವಲ ದಕ್ಷಿಣ ಭಾರತ ರಾಜ್ಯಗಳಿಂದಷ್ಟೇ ಅಲ್ಲದೆ ಉತ್ತರ ಭಾರತದ ರಾಜ್ಯಗಳಿಂದಲೂ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com