ನವದೆಹಲಿ: ಬಾಲಿವುಡ್ ನಟ ಸಲ್ಮಾನ್ಖಾನ್ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕೃಷ್ಣಮೃಗ ಬೇಟೆಗೆ ಸಂಬಂಧಪಟ್ಟಂತೆ ಸುಪ್ರೀಂನಿಂದ ಬುಧವಾರ ಮಹತ್ವದ ತೀರ್ಪು ಹೊರ ಬೀಳಲಿದೆ.
ರಾಜಸ್ಥಾನದಲ್ಲಿ ಕೃಷ್ಣ ಮೃಗ ಬೇಟೆಗೆ ಸಂಬಂಧಪಟ್ಟಂತೆ ಐಧು ವರ್ಷ ಜೈಲು ಶಿಕ್ಷೆ ವಿಧಿಸಿ ಕೆಳ ನ್ಯಾಯಾಲಯ ತೀರ್ಪು ಕೊಟ್ಟಿತ್ತು. ನಟ ಸಲ್ಮಾನ್ ಈ ತೀರ್ಪನ್ನು ಪ್ರಶ್ನಿಸಿ, ಅಲ್ಲಿನ ಹೈಕೋರ್ಟ್ನಿಂದ ತಡೆಯಯಾಜ್ಞೆ ಪಡೆದಿದ್ದರು.
ಈ ಕಾರಣದಿಂದ ಬ್ರಿಟನ್ ವೀಸಾ ಪಡೆಯುವ ಸೌಲಭ್ಯವನ್ನು ಹೊಂದಿದ್ದರು. ಆದರೆ, ತಡೆಯಾಜ್ಞೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜಸ್ಥಾನ ಸರ್ಕಾರ, ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು ಎಂದು ಮೇಲ್ಮನವಿ ಸಲ್ಲಿಸಿತ್ತು.
ಇದೀಗ ವಿಚಾರಣೆ ನಡೆಸಿರುವ ಸುಪ್ರೀಂ ತೀರ್ಪು ಪ್ರಕಟಿಸಲಿದೆ. ಬ್ರಿಟನ್ ಕಾನೂನಿನ ಪ್ರಕಾರ ಯಾವುದೇ ವ್ಯಕ್ತಿ ನಾಲ್ಕು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯಲ್ಲಿ ಶಿಕ್ಷೆಗೆ ಗುರಿಯಾಗಿದ್ದರೆ, ಅಲ್ಲಿನ ವೀಸಾ ಪಡೆಯಲು ಅನರ್ಹರಾಗಿರುತ್ತಾರೆ.
Advertisement