ರಾಷ್ಟ್ರಪತಿ ಪುತ್ರಿಗೆ ಸಿಕ್ಕಿತು ಕೈ ಟಿಕೆಟ್

ಗ್ರೇಟರ್ ಕೈಲಾಶ್ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಅವರಿಗೆ ಟಿಕೆಟ್ ನೀಡಿದೆ...
ಶರ್ಮಿಷ್ಠಾ ಮುಖರ್ಜಿ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ ಸ್ಪರ್ಧೆ
ಶರ್ಮಿಷ್ಠಾ ಮುಖರ್ಜಿ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ ಸ್ಪರ್ಧೆ
Updated on

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಠಾ ಮುಖರ್ಜಿ ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ವತಿಯಿಂದ ಸ್ಪರ್ಧಿಸಲಿದ್ದಾರೆ.

ರಾಷ್ಟ್ರ ರಾಜಧಾನಿಯ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಅವರಿಗೆ ಟಿಕೆಟ್ ನೀಡಿದೆ. ಗುರುವಾರ ಪ್ರಕಟಿಸಿದ 15 ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಶರ್ಮಿಷ್ಠಾರ ಹೆಸರನ್ನು ಪಕ್ಷ ನಾಯಕರು ಪ್ರಕಟಿಸಿದ್ದಾರೆ.

ರಾಷ್ಟ್ರಪತಿ ಪುತ್ರಿಗೆ ಇದು ಮೊದಲ ಚುನಾವಣೆಯಾಗಿದೆ. ಕಥಕ್ ನೃತ್ಯ ಪ್ರವೀಣೆಯಾಗಿರುವ ಅವರು ಹಲವು ತಿಂಗಳಿಂದ ಕಾಂಗ್ರೆಸ್ ರ್ಯಾಲಿ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.

ಫೆ. 7 ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಪಕ್ಷ ನಿರ್ಧಾರವನ್ನು ವಿನೀತರಾಗಿ ಪಾಲಿಸುವುದಾಗಿ ತಿಳಿಸಿದ್ದಾರೆ. 2013ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಈ ಸ್ಥಾನವನ್ನು ಗೆದ್ದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com