ತಾಜ್‌ಮಹಲ್‌ಗೆ 'ಬರಾಕ್ ಒಬಾಮ'

ಎಲ್ಲ ಅಂಗಡಿ ಮುಚ್ಚಾರೆ!...
ಒಬಾಮ ಭೇಟಿ ಹಿನ್ನೆಲೆ ಬಿಗಿ ಭದ್ರತೆ
ಒಬಾಮ ಭೇಟಿ ಹಿನ್ನೆಲೆ ಬಿಗಿ ಭದ್ರತೆ

ನವದೆಹಲಿ/ಆಗ್ರಾ: ಗಣರಾಜ್ಯೋತ್ಸವದ ವಿಶೇಷ ಅತಿಥಿಯಾಗಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಜ.27 ರಂದು ಆಗ್ರಾಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ದೆಹಲಿ-ಆಗ್ರಾ ಹೆದ್ದಾರಿಯ ಇಕ್ಕೆಲೆಗಳಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತೆ ದೆಹಲಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಕೇಂದ್ರಕ್ಕೆ ಮನವಿ ಮಾಡಿದೆ.

ರಸ್ತೆ ಮಾರ್ಗವಾಗಿ ಒಬಾಮ ಆಗ್ರಾಕ್ಕೆ ತೆರಳುವ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಬೇಕೆಂದು ರಾಯಭಾರ ಕಚೇರಿ ಒತ್ತಾಯಿಸಿದೆ.

ಇದರ ಜತೆಗೆ ಜ.24, 25ರಂದು ಕೇಂದ್ರ ದೆಹಲಿಯಲ್ಲಿರುವ ಲ್ಯೂಟನ್ಸ್ ಪ್ರದೇಶವನ್ನೂ ಬಂದ್ ಮಾಡಬೇಕೆಂದು ಅಮೆರಿಕ ಅಧಿಕಾರಿಗಳು ಸೂಚಿಸಿದ್ದಾರೆ. ಅದರ ಜತೆಗೆ ಕೇಂದ್ರ ಸರ್ಕಾರದ ಎಲ್ಲ ಭವನಗಳನ್ನು ಆ ಎರಡು ದಿನಗಳ ಕಾಲ ಮುಚ್ಚುವಂತೆ ಸೂಚಿಸಲಾಗಿದೆ.

ಶುಕ್ರವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಇದರ ಜತೆಗೆ ಇಂಡಿಯಾ ಗೇಟ್, ರಫೀ ಮಾರ್ಗ್ ಮತ್ತು ಇತರ ಪ್ರದೇಶಗಳನ್ನು 24ರಿಂದಲೇ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಬೇಕೆಂದು ಅಮೆರಿಕ ಅಧಿಕಾರಿಗಳು ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com