ನವದೆಹಲಿ: ಪಾಕಿಸ್ತಾನ ತನ್ನ ತಪ್ಪನ್ನು ಸರಿಪಡಿಸಿಕೊಳ್ಳದೇ ತನ್ನ ಉದ್ಧಟತನವನ್ನು ಮೆರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.
ಪಾಕಿಸ್ತಾನ ಮೂಲದ ಉಗ್ರರು ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ಸಂಬಂಧ ಪ್ರತಿಕ್ರಿಯಿಸಿರುವ ರಾಜನಾಥ್ ಸಿಂಗ್ ಪಾಕಿಸ್ತಾನ ಎಂದಿಗೂ ಬದಲಾಗುವುದಿಲ್ಲ. ಉಗ್ರರನ್ನು ಹತ್ತಿಕ್ಕುವ ಬದಲು ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.
ಉದ್ಧಟತನವನ್ನಾ ಬಿಡದ ಪಾಕ್, ತನ್ನ ಚಾಳಿಯನ್ನು ಮುಂದುವರೆಸಿದೆ. ಪಾಕ್ ಬೆದರಿಕೆಗೆ ಭಾರತ ಹೆದರಲ್ಲ ಎಂದು ರಾಜನಾಥ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement