ಪುಣೆ: ಖ್ಯಾತ ವ್ಯಂಗ್ಯ ಚಿತ್ರಕಾರ, ಮೈಸೂರು ಮೂಲದ ಆರ್.ಕೆ ಲಕ್ಷ್ಮಣ್(94) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಮೂತ್ರಪಿಂಡ ಸೋಂಕಿನಿಂದ ಬಳಲುತ್ತಿದ್ದ ಲಕ್ಷ್ಮಣ್ರನ್ನು ಶನಿವಾರ ಪುಣೆಯ ದೀನನಾಥ್ ಮಂಗೇಷ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಲಕ್ಷ್ಮಣ್ರಿಗೆ ಬಹು ಅಂಗ ವೈಫಲ್ಯವಾಗಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶನಿವಾರ ಅವರಿಗೆ ಡಯಾಲಿಸಿಸ್ ಮಾಡಲಾಗಿತ್ತು. ಆರ್.ಕೆ ಲಕ್ಷ್ಮಣ್ ಅವರು ಈ ಹಿಂದೆಯೇ ಶ್ವಾಸಕೋಶದ ಸೋಂಕು, ಮೂತ್ರಪಿಂಡ ಸಮಸ್ಯೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದರು. 2010ರಲ್ಲಿ ಅವರಿಗೆ ಪಾರ್ಶ್ವವಾಯು ಆಗಿತ್ತು ಎಂದು ಡಾ. ಸಮೀರ್ ಜೋಗ್ ತಿಳಿಸಿದ್ದಾರೆ. ಇಷ್ಟೆಲ್ಲ ಆರೋಗ್ಯ ಸಮಸ್ಯೆಗಳಿದ್ದರೂ ಲಕ್ಷ್ಮಣ್ ಅವರು ವ್ಯಂಗ್ಯಚಿತ್ರ ಬರೆಯುವುದನ್ನು ನಿಲ್ಲಿಸಿರಲಿಲ್ಲ ಎಂದು ಹೇಳಲಾಗಿದೆ.
Advertisement