ಅಪಘಾತ: ಟೆಕ್ಕಿ ಸಾವು

ಬನ್ನೇರುಘಟ್ಟ ರಸ್ತೆಯಲ್ಲಿ ಬೈಕ್‌ಗೆ ಸಿಮೆಂಟ್ ಮಿಕ್ಸಿಂಗ್ ಲಾರಿ ಡಿಕ್ಕಿ ಹೊಡೆದು ಸಾಫ್ಟ್‌ವೇರ್ ಉದ್ಯೋಗಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿ ಬೈಕ್‌ಗೆ ಸಿಮೆಂಟ್ ಮಿಕ್ಸಿಂಗ್ ಲಾರಿ ಡಿಕ್ಕಿ ಹೊಡೆದು ಸಾಫ್ಟ್‌ವೇರ್ ಉದ್ಯೋಗಿ ಪವನ್ ಮಧುಕರ್ (28) ಮೃತಪಟ್ಟಿದ್ದಾರೆ.

ಗೊಟ್ಟಿ ಗೆರೆ ನಿವಾಸಿಯಾದ ಪವನ್, ಅರಕೆರೆಯಲ್ಲಿರುವ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಮಂಗಳವಾರ ಮಧ್ಯಾಹ್ನ ಬೈಕ್‌ನಲ್ಲಿ ಕಚೇರಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಅವರ ಮೇಲೆ ಲಾರಿ ಹರಿದು ಸ್ಥಳಿದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಚಾಲಕನ ಬಂಧಿಸಿ, ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಹುಳಿಮಾವು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com