ಟಿಎಂಸಿ ಪರ ವಾದ: ಸಿಬಲ್ ವಿರುದ್ಧ ಕೈ ಕೆಂಗಣ್ಣು

ಕಪಿಲ್ ಸಿಬಲ್
ಕಪಿಲ್ ಸಿಬಲ್
Updated on

ನವದೆಹಲಿ: ಕೇಂದ್ರದ ಮಾಜಿ ಸಚಿವ, ಜನಪ್ರಿಯ ನ್ಯಾಯವಾದಿ ಕಪಿಲ್ ಸಿಬಲ್ ಕಾಂಗ್ರೆಸ್ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಶಾರದಾ ಚಿಟ್‌ಫಂಡ್ ಹಗರಣದಲ್ಲಿ ಸಿಬಿಐ ಅನ್ನು ದುರುಪಯೋಗ ಮಾಡುತ್ತಿದೆ ಎಂದು ಪಶ್ಟಿಮ ಬಂಗಾಳ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅದರ ಪರವಾಗಿ ವಾದ ಮಂಡಿಸುತ್ತಿರುವುದು ಕಪಿಲ್ ಸಿಬಲ್. ಇದು ಪಶ್ಟಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ನಾಯಕರ ಕೋಪಕ್ಕೆ ಕಾರಣ. ಈ ಬಗ್ಗೆ ರಾಜ್ಯ ಘಟಕ ನಾಯಕರು ವರಿಷ್ಠರಿಗೆ ದೂರು ನೀಡಿದ್ದರು.

ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶ್ಟಿಮ ಬಂಗಾಳ ಕಾಂಗ್ರೆಸ್ ಉಸ್ತುವಾರಿ ಸಿ.ಪಿ ಜೋಶಿ ರಾಜ್ಯ ಮುಖಂಡರ ನಿಲುವಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com