
ಬೆಂಗಳೂರು: ಭಾರತಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭೇಟಿ ಹಾಗೂ ಉಗ್ರರ ಕರಿ ನೆರಳಿನ ಹಿನ್ನೆಲೆಯಲ್ಲಿ ಕಬ್ಬನ್ ರಸ್ತೆ ಮಾಣೆಕ್ ಷಾ ಕವಾಯತು ಮೈದಾನದಲ್ಲಿ ಸೋಮ ವಾರ ನಡೆಯುವ 66ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮಕ್ಕೆ ನಗರ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
ಇತ್ತೀಚಿಗಿನ ಬಾಂಬ್ ಸ್ಪೋಟ ಹಾಗೂ ಉಗ್ರರ ಬಂಧನ, ಬೆದರಿಕೆಗಳ ಹಿನ್ನೆಲೆಯಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಭದ್ರತೆ ಕೈಗೊಳ್ಳಲಾಗಿದೆ. ಮೈದಾನ ಮತ್ತು ಇತರೆ ಕಡೆಗಳಲ್ಲಿ ಬಂದೋ ಬಸ್ತ್ ಕರ್ತವ್ಯಕ್ಕೆ 9 ಡಿಸಿಪಿ, 22 ಎಸಿಪಿ, 96 ಪಿಐ, 256 ಪಿಎಸ್ಐ, 14 ಮಹಿಳಾ ಪಿಎಸ್ಐ, 327 ಎಎಸ್ಐ, 850 ಹೆಡ್ ಕಾನ್ಸ್ ಟೇಬಲ್ ಗಳು, 1882 ಪೇದೆ, 128 ಮಹಿಳಾ ಸಿಬ್ಬಂದಿಯೊಂದಿಗೆ 150 ಮಫ್ತಿ ಮತ್ತು ಪೊಲೀಸ್ ಅಧಿಕಾರಿಗಳು ಸಿಬ್ಬಂದಿ, 37 ಕೆಎಸ್ಆರ್ಪಿ ಮತ್ತು ಸಿಎಆರ್ ತುಕಡಿ, 2 ಕ್ಷಿಪ್ರ ಕಾರ್ಯ ಪಡೆ ಸೇರಿ 3 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.
ಅಲ್ಲದೇ 1 ಸಾವಿರ ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಶನಿವಾರ ಬಿಬಿಎಂಪಿ ಆಯುಕ್ತ ಲಕ್ಷ್ಮೀ ನಾರಾಯಣ ಅವರಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದರು.
ಮೈದಾನಕ್ಕೆ ಕಳೆದ 15 ದಿನಗಳಿಂದ ಶಸ್ತ್ರಾ ಸಜ್ಜಿತ
ಪೊಲೀಸರನ್ನು ನಿಯೋಜಿಸಲಾಗಿದ್ದು ಎಲ್ಲ ಹೋಟೆಲ್ ಲಾಡ್ಜ್, ತಂಗುದಾಣಗಳು ಹಾಗೂ ಇನ್ನಿತರೆ ಸ್ಥಳಗಳಲ್ಲಿ ಅನುಮಾನಸ್ಪದ ವಾಗಿ ವಾಸ್ತವ್ಯ ಹೂಡಿರುವವರ ಮೇಲೆ ನಿಗಾ ವಹಿಸಲಾಗಿದೆ.
ಮೈದಾನದ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ವೀಕ್ಷಣಾ ಗೋಪುರಗಳ ಮೇಲೆ ಶಸ್ತ್ರ ಸಜ್ಜಿತ ಪೊಲೀಸರು ಬೈನಾಕ್ಯುಲರ್ಗಳನ್ನು ಬಳಸಿ ಗಮನಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರನ್ನೂ ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತದೆ.
ಇದೇ ವೇಳೆ ಮಾತನಾಡಿದ ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ, ಜ.26 ಬೆಳಗ್ಗೆ 8.58ಕ್ಕೆ ರಾಜ್ಯಪಾಲರು ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಇದೇ ವೇಳೆ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಮೇಲಿಂದ ಪುಷ್ಪ ವೃಷ್ಟಿ ಮಾಡುವ ವ್ಯವಸ್ಥೆ ಮಾಡಲಾಗಿದೆ. ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪೂರ್ವಭಾವಿ ತಾಲೀಮು ಜ.22ರಿಂದ ನಡೆ ಯುತ್ತಿದೆ.4 ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 2650 ಮಕ್ಕಳು ಪಾಲ್ಗೊಳ್ಳಲಿದ್ದಾರೆ ಎಂದರು.
ಪಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್ ಗೈಡ್ಸ್, ಎನ್ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡ ಕವಾಯತು ಮತ್ತು ಬ್ಯಾಂಡ್ನ 55 ತುಕಡಿಗಳಲ್ಲಿ ಸುಮಾರು 1800 ಜನ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮೈದಾನದ ಒಳಗೆ ಪ್ರವೇಶಿಸುವವರಿಗೆ
Advertisement