ಶಾರದಾ ಚಿಟ್‌ಫಂಡ್: ಮುಕುಲ್ ರಾಯ್ ವಿಚಾರಣೆ

ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣ ಹಲವು ತಿರುವುಗಳನ್ನು ಪಡೆಯುತ್ತಿದ್ದು, ಪ್ರಕರಣ...
ಟಿಎಂಸಿ ನಾಯಕ ಮುಕುಲ್ ರಾಯ್
ಟಿಎಂಸಿ ನಾಯಕ ಮುಕುಲ್ ರಾಯ್

ನವದೆಹಲಿ: ಬಹುಕೋಟಿ ಹಗರಣ ಶಾರದಾ ಚಿಟ್ ಫಂಡ್ ಹಗರಣ ಹಲವು ತಿರುವುಗಳನ್ನು ಪಡೆಯುತ್ತಿದ್ದು, ಪ್ರಕರಣ ಕುರಿತಂತೆ ಸಿಬಿಐ ಶುಕ್ರವಾರ ಟಿಎಂಸಿ ನಾಯಕ ಮುಕುಲ್ ರಾಯ್ ಅವರನ್ನು ವಿಚಾರಣೆಗೊಳಪಡಿಸಿದೆ.

ಸಿಬಿಐ ವಿಚಾರಣೆ ಕುರಿತಂತೆ ಸ್ಪಷ್ಟನೆ ನೀಡಿರುವ ಮುಕುಲ್ ರಾಯ್ ಅವರು, ವಿಚಾರಣೆಗೂ ಮುನ್ನ ಸಿಬಿಐ ಅಧಿಕಾರಿಗಳು ತನಿಖೆಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಹಾಗಾಗಿಯೇ ಪ್ರಕರಣದ ತನಿಖೆಗೆ ಸಹಾಯ ಮಾಡಲು ವಿಚಾರಣೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೆ, ನಾನು ಯಾವ ತಪ್ಪು ಮಾಡಿಲ್ಲ. ಇದೆಲ್ಲ ವಿರೋಧ ಪಕ್ಷಗಳ ಪಿತೂರಿ ಎಂದು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮುಕುಲ್ ರಾಯ್ ಹೇಳಿದರು.

ಶಾರದಾ ಚಿಟ್‌ಫಂಡ್ ಹಗರಣವನ್ನು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕಂಪನಿಯ ಮೇಲಧಿಕಾರಿ ಸುದೀಪ್ತ ಸೇನ್ ಅವರ ದೂರವಾಣಿ ಕರೆಗಳ ದಾಖಲೆಗಳನ್ನು ಪರಿಶೀಲಿಸುವ ವೇಳೆ ಸುದೀಪ್ತ ಸೇನ್ ಹಲವು ಬಾರಿ ಟಿಎಂಸಿ ನಾಯಕ ಮುಕುಲ್ ರಾಯ್ ಅವರೊಂದಿಗೆ ಮಾತನಾಡಿರುವುದಾಗಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಮುಕುಲ್ ರಾಯ್ ಅವರಿಗೆ ಸಿಬಿಐ ಅಧಿಕಾರಿಗಳು ಮೇಲ್ ಮೂಲಕ ಜ.12 ರಂದು ಸಮನ್ಸ್ ಜಾರಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com