ಅಲ್ಲದೆ ದೆಹಲಿ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಸಿಹಿದ್ದು, ಈ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೂ ದೂರು ಸಲ್ಲಿಸುವುದಾಗಿ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇನ್ನು ಇದೇ ವಿಚಾರವಾಗಿ ಆಪ್ ನ ಮಾಜಿ ಮುಖಂಡ ಪ್ರಶಾಂತ್ ಭೂಷಣ್ ಕೂಡ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಎಫ್ ಎಂ ರೇಡಿಯೋದಲ್ಲಿ ಪ್ರಸಾರವಾಗುವ ಒಂದೇ ಒಂದು ಜಾಹಿರಾತಿಗೆ ಸರ್ಕಾರ ಕೋಟ್ಯಂತರ ರುಪಾಯಿಗಳನ್ನು ವ್ಯಯಿಸಿದೆ. ಇದು ನ್ಯಾಯಾಂಗ ನಿಂದನೆಯಾಗಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.