ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಹುತಾತ್ಮ ಪಟ್ಟವೇಕೆ?

ಕಳೆದ ಏಪ್ರಿಲ್ ನಲ್ಲಿ ರಾಜಧಾನಿಯಲ್ಲಿ ನಡೆದ ಆಪ್ ರ್ಯಾಲಿಯ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ರಾಜಸ್ಥಾನದ ರೈತನಿಗೆ ಹುತಾತ್ಮ ಪಟ್ಟ ನೀಡಿದ ದೆಹಲಿ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ...
ಭೂ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಪ್ ಪಕ್ಷ ನಡೆಸಿದ ಪ್ರತಿಭಟನೆ ವೇಳೆ ಆತ್ಮಹತ್ಯೆ ಮಾಡಿಕೊಂಡ ರೈತ ಗಜೇಂದ್ರ ಸಿಂಗ್
ಭೂ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಪ್ ಪಕ್ಷ ನಡೆಸಿದ ಪ್ರತಿಭಟನೆ ವೇಳೆ ಆತ್ಮಹತ್ಯೆ ಮಾಡಿಕೊಂಡ ರೈತ ಗಜೇಂದ್ರ ಸಿಂಗ್
Updated on

ನವದೆಹಲಿ: ಕಳೆದ ಏಪ್ರಿಲ್ ನಲ್ಲಿ ರಾಜಧಾನಿಯಲ್ಲಿ ನಡೆದ ಆಪ್ ರ್ಯಾಲಿಯ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ರಾಜಸ್ಥಾನದ ರೈತನಿಗೆ ಹುತಾತ್ಮ ಪಟ್ಟ ನೀಡಿದ ದೆಹಲಿ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ.

ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರೋಹಿಣಿ ಮತ್ತು ನ್ಯಾ.ಜಯಂತ್‍ನಾಥ್ ಈ ಬಗ್ಗೆ ಸರ್ಕಾರದಿಂದ ವಿವರಣೆ ಕೇಳಿದೆ. ``ಆತ್ಮಹತ್ಯೆ ಒಂದು ಅಪರಾಧ. ಅದನ್ನು ವೈಭವೀಕರಿಸುವುದು ಸರಿಯಲ್ಲ'' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಭೂಸ್ವಾಧೀನ ಮಸೂದೆ ಜಾರಿಯ ವಿರುದ್ಧ ಆಪ್ ನಡೆಸಿದ ರ್ಯಾಲಿಯಲ್ಲಿ ಏ.28ರಂದು ರಾಜಸ್ಥಾನದ ರೈತ ಗಜೇಂದ್ರಸಿಂಗ್ ಜಂತರ್‍ಮಂತರ್ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಬಗ್ಗೆ ಇನ್ನೂ ತನಿಖೆ ಜಾರಿಯಲ್ಲಿದೆ. ಆನಂತರ ಹುತಾತ್ಮ ಪಟ್ಟ ನೀಡಿದ ಆಪ್ ಸರ್ಕಾರದ ಕ್ರಮ ವಿರೋಧಿಸಿ ಮೇ ತಿಂಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com