ಶ್ರೀನಗರ: ಉಗ್ರರ ಗಡಿ ನುಸುಳುವ ಯತ್ನವನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಮೂವರು ಉಗ್ರರನ್ನು ಬಡಿದುರುಳಿಸಿದ್ದಾರೆ.
ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಸೇನಾಪಡೆಗಳು ಉಗ್ರರೊಂದಿಗೆ ಭಾರೀ ಗುಂಡಿನ ಕಾಳಗ ನಡೆಸಿದ್ದು, ಈ ವೇಳೆ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಸೇನಾ ಮೂಲಗಳ ವರದಿ ತಿಳಿಸಿದೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು ,ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.