ಗಡಿ ನುಸುಳುವ ಯತ್ನ ವಿಫಲ: ಭದ್ರತಾ ಪಡೆ ಗುಂಡಿಗೆ 3 ಉಗ್ರರ ಬಲಿ

ಉಗ್ರರ ಗಡಿ ನುಸುಳುವಿಕೆ ಯತ್ನವನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಮೂವರು ಉಗ್ರರನ್ನು ಬಡಿದುರುಳಿಸಿದ್ದಾರೆ...
ಭದ್ರತಾ ಪಡೆ
ಭದ್ರತಾ ಪಡೆ
Updated on
ಶ್ರೀನಗರ: ಉಗ್ರರ ಗಡಿ ನುಸುಳುವ ಯತ್ನವನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಮೂವರು ಉಗ್ರರನ್ನು ಬಡಿದುರುಳಿಸಿದ್ದಾರೆ. 
ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಸೇನಾಪಡೆಗಳು ಉಗ್ರರೊಂದಿಗೆ ಭಾರೀ ಗುಂಡಿನ ಕಾಳಗ  ನಡೆಸಿದ್ದು, ಈ ವೇಳೆ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಸೇನಾ ಮೂಲಗಳ ವರದಿ ತಿಳಿಸಿದೆ. 
ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು ,ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com