ವರದಿಗಾರ ಅಕ್ಷಯ್‌ ಸಿಂಗ್ ಸಂಸ್ಕಾರದಲ್ಲಿ ರಾಹುಲ್, ಕೇಜ್ರಿವಾಲ್ ಭಾಗಿ

ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ನೇಮಕಾತಿ ಹಗರಣದ ತನಿಖಾ ವರದಿಗಾರ ಅಕ್ಷಯ್ ಸಿಂಗ್‌ ಅವರ ಅಂತ್ಯ ಸಂಸ್ಕಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ...
ಅಕ್ಷಯ್ ಸಿಂಗ್
ಅಕ್ಷಯ್ ಸಿಂಗ್

ನವದೆಹಲಿ: ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ನೇಮಕಾತಿ ಹಗರಣದ ತನಿಖಾ ವರದಿಗಾರ ಅಕ್ಷಯ್ ಸಿಂಗ್‌ ಅವರ ಅಂತ್ಯ ಸಂಸ್ಕಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಾಲ್ಗೊಂಡಿದ್ದರು.

38 ವರ್ಷದ ಅಕ್ಷಯ್ ಸಿಂಗ್ ಅವರ ಅಂತ್ಯ ಸಂಸ್ಕಾರವು ಪೂರ್ವ ದೆಹಲಿಯ ನಿಗಮಬೋದಲ್ಲಿ ಭಾನುವಾರ ನೆರವೇರಿತು. ರಾಹುಲ್ ಅವರಲ್ಲದೇ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ಮಾಕನ್‌ ಹಾಗೂ ಕಾಂಗ್ರೆಸ್‌ ಮುಖಂಡರಾದ ದಿಗ್ವಿಜಯ್ ಸಿಂಗ್, ರಣದೀಪ್‌ ಸುರ್ಜೇವಾಲಾ ಅವರೂ ಅಂತ್ಯ ಸಂಸ್ಕಾರ ಭಾಗವಹಿಸಿದ್ದರು.

ಅಕ್ಷಯ್ ಸಿಂಗ್ ಅವರು ವ್ಯಾಪಂ ಹಗರಣದಲ್ಲಿ ಹೆಸರು ಕೇಳಿಬಂದ ಬಳಿಕ ಸಾವನ್ನಪ್ಪಿದ ಯುವತಿಯ ಪೋಷಕರ ಸಂದರ್ಶನ ನಡೆಸಿದ ಬಳಿಕ ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com