ಹೇಮಮಾಲಿನಿಯಿಂದ ಘೋರ ಅಪರಾಧವಾಗಿದೆ: ಬಬೂಲ್ ಸುಪ್ರಿಯೋ

ನಟಿ ಹಾಗೂ ಬಿಜೆಪಿ ಸಂಸದೆ ಹೇಮಮಾಲಿನಿ ಕಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ಬಾಲಕಿ ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬಬೂಲ್ ಸುಪ್ರಿಯೋ
ಬಬೂಲ್ ಸುಪ್ರಿಯೋ

ನವದೆಹಲಿ: ನಟಿ ಹಾಗೂ ಬಿಜೆಪಿ ಸಂಸದೆ ಹೇಮಮಾಲಿನಿ ಕಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ಬಾಲಕಿ ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಕೇಂದ್ರ ಬಿಜೆಪಿ ಸಚಿವರೊಬ್ಬರು ತಮ್ಮದೇ ಪಕ್ಷದ ಸಂಸದೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೇಮ ಮಾಲಿನಿಯಿಂದ ಗಂಭೀರವಾದ ಅಪರಾಧವಾಗಿದೆ ಎಂದು ಸಚಿವ ಬಬೂಲ್ ಸುಪ್ರಿಯೋ ಟೀಕಿಸಿದ್ದಾರೆ. ಬಾಲಕಿಯ ತಂದೆ ಟ್ರಾಫಿಕ್ ನಿಯಮ ಪಾಲಿಸಿದ್ದರೆ ಆಕೆ ಸಾಯುತ್ತಿರಲಿಲ್ಲ ಎಂದು ಹೇಮಮಾಲಿನಿ ಮಾಡಿದ್ದ ಟ್ವೀಟ್ ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸುಪ್ರಿಯೋ ಅಪಘಾತವಾದ ಸಂದರ್ಭದಲ್ಲಿ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕಿತ್ತು. ಆದರೆ ಹೇಮ ಮಾಲಿನಿ ಆ ಕೆಲಸ ಮಾಡಿಲ್ಲ. ಇದು ಅವರಿಂದಾದ ಬಹು ದೊಡ್ಡ ತಪ್ಪು, ಈ ಸತ್ಯವನ್ನು ಅವರು ಒಪ್ಪಿಕೊಳ್ಳಬೇಕು ಎಂದು ಸುಪ್ರಿಯೋ ಕಿಡಿಕಾರಿದ್ದಾರೆ.

ಹೇಮಾ ಮಾಲಿನ ಮಾಡಿದ್ದ ಟ್ವೀಟ್ ಗೆ ಮೃತ ಬಾಲಕಿಯ ತಂದೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು. ಅಪಘಾತವಾದ ಸಂದರ್ಭದಲ್ಲಿ ತನ್ನ ಮಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರೆ ಬದುಕುಳಿಯುತ್ತಿದ್ಧಳು ಎಂದು ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com