ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಸ್ಮೃತಿ ಇರಾನಿ

ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಶಸ್ತ್ರಚಿಕಿತ್ಸೆಗಾಗಿ ಗುರ್ ಗಾಂವ್ ನ ಆಸ್ಪತ್ರೆಯೊಂದರಲ್ಲಿ ಗುರುವಾರ ದಾಖಲಾಗಿದ್ದಾರೆ...
ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ
ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ

ಗುರುಗಾಂವ್: ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರುಶಸ್ತ್ರಚಿಕಿತ್ಸೆಗಾಗಿ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ದಾಖಲಾಗಿದ್ದಾರೆ.

ಸೆಕ್ಟರ್ 38 ಪ್ರದೇಶದಲ್ಲಿರುವಮೆಡಿಸಿಟಿ ಮೆದಾಂತ ಆಸ್ಪತ್ರೆಯೊಂದರಲ್ಲಿ ಸ್ಮೃತಿ ಇರಾನಿ ದಾಖಲಾಗಿದ್ದು, ಥೈರಾಯ್ಡ್ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಸ್ಮೃತಿ ಇರಾನಿ ಅವರಿಗೆವಿಶೇಷ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿದ್ದು, ಇರಾನಿ ಆರೋಗ್ಯವಾಗಿದ್ದು ಯಾವುದೇ ತೊಂದರೆ ಇಲ್ಲಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಮೃತಿ ಇರಾನಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆದಾವಿಸಿದ ಕೇಂದ್ರ ಸಚಿವ ಹರ್ಷವರ್ಧನ್ ಅವರು ಇರಾನಿ ಅವರು ಆರೋಗ್ಯದ ಕುರಿತಂತೆ ಮಾಹಿತಿಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com