ವ್ಯಾಪಂ ಹಗರಣ, ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನಿಗೂಢ ಸಾವುಗಳ ಮೂಲಕ ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ವ್ಯಾಪಂ ಹಗರಣವನ್ನು ಸುಪ್ರೀಂ ಕೋರ್ಟ್ ಗುರುವಾರ ಸಿಬಿಐ ತನಿಖೆಗೆ ಒಪ್ಪಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ನಿಗೂಢ ಸಾವುಗಳ ಮೂಲಕ ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ವ್ಯಾಪಂ ಹಗರಣವನ್ನು ಸುಪ್ರೀಂ ಕೋರ್ಟ್ ಗುರುವಾರ ಸಿಬಿಐ ತನಿಖೆಗೆ ಒಪ್ಪಿಸಿದೆ. ಅಲ್ಲದೇ ಈ ಸಂಬಂಧ ಮಧ್ಯಪ್ರದೇಶ ರಾಜ್ಯಪಾಲ, ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳೊಳಗೆ ಉತ್ತರ ನೀಡುವಂತೆ ಸೂಚಿಸಿ, ನೋಟಿಸ್ ಜಾರಿ ಮಾಡಿದೆ.

ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ 2 ವರ್ಷದಲ್ಲಿ ಇದುವರಗೆ 48 ಸಾಕ್ಷಿಗಳು ನಿಗೂಢವಾಗಿ
ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಐದು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಇಂದು ಆ ಎಲ್ಲಾ ಅರ್ಜಿಗಳ
ವಿಚಾರಣೆ ನಡೆಸಿದ ಮುಖ್ಯ ನಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ವಿಭಾಗೀಯ ಪೀಠ, ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗೂಢ ಸಾವಿನ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು, ಈ ನಿಗೂಢ ಸಾವುಗಳ ಕುರಿತು ಸಿಬಿಐ ತನಿಖೆ ನಡೆಸಲಿದೆ.

ಇನ್ನು ಈ ಸಂಬಂಧ ಜಬಲ್‌ಪುರ್ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಇಲ್ಲಿ ವಿಚಾರಣೆ ನಡೆಯುವಾಗ ಅಲ್ಲಿ ಯಾವುದೇ ಆದೇಶ ನೀಡಬೇಡಿ ಎಂದು ಸೂಚಿಸಿದೆ.

ವ್ಯಾಪಂ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕಾಂಗ್ರೆಸ್ ಪಕ್ಷ ಸೇರಿದಂತೆ ಇತರೆ ಪಕ್ಷಗಳು ಒತ್ತಡ ಹೇರಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com