ನವದೆಹಲಿ: ರಾಜ್ಯ ದೆಹಲಿಯಲ್ಲಿ ಬಡ ಬೀದಿ ವ್ಯಾಪಾರಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ಇಂದು ಬೀದಿ ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಿ ಮಾತನಾಡಿರುವ ಅವರು, ರಾಜ್ಯದಲ್ಲಿ ಬೀದಿ ವ್ಯಾಪಾರಿಗಳನ್ನು ತಿರಸ್ಕರಿಸಲಾಗುತ್ತಿದ್ದು, ಅವರಿಗೆ ಜೀವನ ನಡೆಸಲು ಸರಿಯಾದ ವಾಸಸ್ಥಾನ ಸಿಗುತ್ತಿಲ್ಲ. ಶೆಡ್ ಗಳಲ್ಲಿ ಜೀವನ ನಡೆಸುತ್ತಿದ್ದರು ಸಹ ಆ ಸ್ಥಳವನ್ನು ಕಿತ್ತುಕೊಳ್ಳಲಾಗಿದೆ. ಹೀಗಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರಿಸುವಂತೆ ಬಳಿ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಬೀದಿ ವ್ಯಾಪಾರಿಗಳನ್ನು ಹಾಗೂ ತಿರುಗು ವ್ಯಾಪಾರಿಗಳನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಾಗಿದ್ದು, ಶೀಘ್ರದಲ್ಲೇ ಅವರ ಸಮಸ್ಯೆಗಳ ಕುರಿತಂತೆ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದು ಹೇಳಿದ್ದಾರೆ.
Advertisement