ಕಲ್ಲಿದ್ದಲು ಹಗರಣ: ಮಧುಕೊಡಾ ಸೇರಿ 9 ಜನರ ವಿರುದ್ಧ ದೋಷಾರೋಪಣೆ ಸಲ್ಲಿಸಲು ಕೋರ್ಟ್ ಆದೇಶ

ಕಲ್ಲಿದ್ದಲು ಹಂಚಿಕೆ ಹಗರಣದ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡಾ, ಸೇರಿದಂತೆ ಒಟ್ಟು 9 ಜನರನ್ನು ವಿಚಾರಣೆಗೆ ಒಳಪಡಿಸಬೇಕೆಂದು ಸಿಬಿಐ ವಿಶೇಷ ನ್ಯಾಯಲಾಯ ಆದೇಶ ನೀಡಿದೆ.
ಕಲ್ಲಿದ್ದಲು ಹಂಚಿಕೆ ಹಗರಣ
ಕಲ್ಲಿದ್ದಲು ಹಂಚಿಕೆ ಹಗರಣ

ನವದೆಹಲಿ: ಕಲ್ಲಿದ್ದಲು ಹಂಚಿಕೆ ಹಗರಣದ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹೆಚ್.ಸಿ ಗುಪ್ತಾ, ಜಾರ್ಖಂಡ್ ನ ಮಾಜಿ ಮುಖ್ಯ ಕಾರ್ಯದರ್ಶಿ ಅಶೋಕ್ ಕುಮಾರ್ ಬಸು ಸೇರಿದಂತೆ ಒಟ್ಟು 9 ಜನರನ್ನು ವಿಚಾರಣೆಗೆ ಒಳಪಡಿಸಬೇಕೆಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಸರ್ಕಾರಿ ನೌಕರರಾದ ಬಸಂತ್ ಕುಮಾರ್ ಭಟ್ಟಾಚಾರ್ಯ ಹಾಗೂ ಬಿಪಿನ್ ಬಿಹಾರಿ ಸಿಂಗ್, ವಿನಿ ಕಬ್ಬಿಣ ಮತ್ತು ಉಕ್ಕು ಉದ್ಯೋಗ್ ಲಿಮಿಟೆಡ್(ವಿ.ಐ.ಎಸ್.ಯು.ಎಲ್) ನ ನಿರ್ದೇಶಕ ವೈಭವ್ ತುಲ್ಸ್ಯಾನ್, ಮಧುಕೋಡಾ ಅವರ ಆಪ್ತ ವಿಜಯ್ ಜೋಷಿ ಹಾಗೂ ಲೆಕ್ಕಪರಿಶೋಧಕರ ನವೀನ್ ಕುಮಾರ್ ವಿರುದ್ಧ ಕ್ರಿಮಿನಲ್ ಸಂಚು, ಮೋಸ ಆರೋಪದಡಿ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕೆಂದು ಕೋರ್ಟ್ ನ ನ್ಯಾ. ಭರತ್ ಪರಾಶರ್ ಸಿಬಿಐ ಪೊಲೀಸರಿಗೆ  ಆದೇಶ ನೀಡಿದ್ದಾರೆ.

ಹಗರಣಕ್ಕೆ ಸಂಬಂಧಿಸಿದ ಒಟ್ಟು 9 ಆರೋಪಿಗಳ ವಿರುದ್ಧ ಭ್ರಷ್ಟಾಚ ತಡೆ ಕಾಯ್ದೆಯ ಐಪಿಸಿ ಸೆಕ್ಷನ್ 120 ಬಿ ( ಕ್ರಿಮಿನಲ್ ಸಂಚು) 420 (ಮೋಸ) ಪ್ರಕಾರ ದೋಷಾರೋಪಣೆ ಸಲ್ಲಿಸುವಂತೆ ಆದೇಶಿಸಿ ಮುಂದಿನ ವಿಚಾರಣೆಯನ್ನು ಜುಲೈ.31  ಕ್ಕೆ ಮುಂದೂಡಿದ್ದಾರೆ.

ಕಲ್ಲಿದ್ದಲು ಹಂಚಿಕೆಯಲ್ಲಿ ಮಧು ಕೊಡ ಹಾಗೂ ಜಾರ್ಖಂಡ್ ನ ಮಾಜಿ ಮುಖ್ಯ ಕಾರ್ಯದರ್ಶಿ ಅಶೋಕ್ ಬಸು ವಿನಿ ಕಬ್ಬಿಣ ಮತ್ತು ಉಕ್ಕು ಉದ್ಯೋಗ್ ಸಂಸ್ಥೆಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಸಂಚು ರೂಪಿಸಿದ್ದರು ಎಂದು ಸಿಬಿಐ ಈ ಹಿಂದೆ ಕೋರ್ಟ್ ಗೆ ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com