ಶಿರಡಿ: ಅಹ್ಮದ್ ನಗರ ಜಿಲ್ಲೆಯ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಸಂಜಯ್ ಮುರಳಿಧರ್ ಸಸನೆ ಎಂಬುವವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರೀರಾಂಪುರದಲ್ಲಿ ಶನಿವಾರ ನಡೆದಿದೆ.
ಸಂಜಯ್ ಮುರಳಿಧರ್ ಸಸನೆ ಆತ್ಮಹತ್ಯೆಗೆ ಶರಣಾದ ಅಹ್ಮದ್ ನಗರದ ಕಾಂಗ್ರೆಸ್ ಸಮಿತಿ ಮುಖ್ಯಸ್ಥನಾಗಿದ್ದು, ಇವರು ಶಿರಡಿ ಸಾಯಿಬಾಬ್ ಸಂಸ್ಥಾನ ಟ್ರಸ್ಟ್ ಮಾಜಿ ಅಧ್ಯಕ್ಷ ಜಯಂತ್ ಸಸನೆ ಅವರ ಅಣ್ಣರಾಗಿದ್ದರು ಎಂದು ಹೇಳಲಾಗುತ್ತಿದೆ. ಇಂದು ಬೆಳಿಗ್ಗೆ ಶ್ರೀರಾಂಪುರದಲ್ಲಿರುವ ಅವರ ನಿವಾಸದಲ್ಲಿ ಸಂಜಯ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ.
ಸಂಜಯ್ ಮುರಳಿಧರ್ ಸಸನೆ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆಂಬುದು ಈವರೆಗೂ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಪ್ರವರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸಂಜಯ್ ಮುರಳಿಧರ್ ಸಸನೆ ಅವರ ದೇಹವನ್ನು ಶವ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ.
Advertisement