ಮುಂಬೈ: ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಮಿತ್ರ ಪಕ್ಷ ಬಿಜೆಪಿ ವಿರುದ್ಧವೇ ವಾಗ್ದಾಳಿ ನಡೆಸಿದ್ದು, ಅಧಿಕಾರಕ್ಕೆ ಬರುವ ಮುನ್ನ 'ಅಚ್ಛೆ ದಿನ್(ಒಳ್ಳೆಯ ದಿನಗಳು) ಭರವಸೆ ನೀಡಿದ್ದ ಮೋದಿ ಸರ್ಕಾರ ಈಗ ಜನತೆಗೆ ಮೋಸ ಮಾಡಬಾರದು ಎಂದು ಹೇಳಿದ್ದಾರೆ.
'ಹಿಂದಿನ ಸರ್ಕಾರದ ಅವ್ಯವಸ್ಥೆಯನ್ನು ಸರಿ ಮಾಡಲು 50 ವರ್ಷ ಸಾಕಾಗುವುದಿಲ್ಲ. ಆದರೆ ಐದು ವರ್ಷದಲ್ಲಿ ಜನರ ಸಾಕಷ್ಟು ಆಕಾಂಕ್ಷೆಗಳನ್ನು ಈಡೇರಿಸಬಹುದು. ನೀವು(ಬಿಜೆಪಿ) ಜನತೆಗೆ 'ಅಚ್ಛೆ ದಿನ್'ದ ಆಶ್ವಾಸನೆ ನೀಡಿದ್ದೀರಿ. ಈಗ ನೀವು ಅವರಿಗೆ ಮೋಸ ಮಾಡಲು ಸಾಧ್ಯವಿಲ್ಲ ಎಂದು ಶಿವಸೇನಾ ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಠಾಕ್ರೆ, ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರ ಬದಲಾಗಿದ್ದರೂ, ಅಂತಹ ಹೇಳಿಕೊಳ್ಳುವಂತಹ ಬದಲಾವಣೆಯಾಗಿಲ್ಲ ಎಂದರು.
Advertisement