ಉತ್ತರಪ್ರದೇಶ:ಟಿಕೆಟ್ ಕೇಳಿದ್ದಕ್ಕಾಗಿ ಸಿನೆಮಾ ಹಾಲ್ ನಲ್ಲಿ ಸಮಾಜವಾದಿ ಪಕ್ಷದ ಶಾಸಕರೊಬ್ಬರ ಪುತ್ರ ಭದ್ರತಾ ಸಿಬ್ಬಂದಿ ಮೇಲೆ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಸಮಾಜವಾದಿ ಪಕ್ಷದ ಶಾಸಕ ಲಲ್ಮುಖಿ ಸಿಂಗ್ ಅವರ ಪುತ್ರ ರಾಹುಲ್ ಮತ್ತು ಆತನ ಸ್ನೇಹಿತರು ಮಾಲ್ ವೊಂದಕ್ಕೆ ಸಿನಿಮಾ ವೀಕ್ಷಿಸಲೆಂದು ಹಾಲ್ ಒಳಗೆ ಹೋಗಿದ್ದಾರೆ. ಆಗ ಭದ್ರತಾ ಸಿಬ್ಬಂದಿ ಪ್ರವೇಶದ್ವಾರದ ಬಳಿ ನಿಲ್ಲಿಸಿ ಟಿಕೆಟ್ ತೋರಿಸಿ ಎಂದು ಕೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ರಾಹುಲ್ ಮತ್ತು ಅವನ ಸ್ನೇಹಿತರು ದಾಳಿ ಮಾಡಿದ್ದಾರೆ.
ರಾಹುಲ್ ಈ ಹಿಂದೆಯೂ ತನ್ನ ತಂದೆಯ ರಾಜಕೀಯ ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಕುಕೃತ್ಯ ನಡೆಸಿ ಸಿಕ್ಕಿಬಿದ್ದಿದ್ದ ಎಂದು ಸ್ಥಳೀಯರು ಹೇಳುತ್ತಾರೆ.
Advertisement