ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ನೇರಪ್ರಸಾರ ಮಾಡದಿರಲು ಸರ್ಕಾರದ ಆದೇಶ

ಪಂಜಾಬ್ ನ ಗುರ್ದಾಸ್ ಪುರದಲ್ಲಿ ನಡೆಯುತ್ತಿರುವ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ನೇರಪ್ರಸಾದ ಮಾಡದಂತೆ ಆದೇಶ.
ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ(ಸಂಗ್ರಹ ಚಿತ್ರ)
ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ(ಸಂಗ್ರಹ ಚಿತ್ರ)
Updated on

ನವದೆಹಲಿ: ಪಂಜಾಬ್ ನ ಗುರ್ದಾಸ್ ಪುರದಲ್ಲಿ ನಡೆಯುತ್ತಿರುವ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ನೇರಪ್ರಸಾರ ಮಾಡದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಟಿ.ವಿ( ಸುದ್ದಿ) ಮಾಧ್ಯಮಗಳಿಗೆ ಸೂಚನೆ ನೀಡಿದೆ.

ಸರ್ಕಾರ ತನ್ನ ಆದೇಶದಲ್ಲಿ 2015 ರ ಕೇಬಲ್ ಟೆಲಿವಿಶನ್ ನೆಟ್ವರ್ಕ್ (ತಿದ್ದುಪಡಿ ಕಾಯ್ದೆ)ಯನ್ನು ಉಲ್ಲೇಖಿಸಿದ್ದು ಭಯೋತ್ಪಾದನೆ  ನಿಗ್ರಹ ಕಾರ್ಯಾಚರಣೆಯನ್ನು ನೇರ ಪ್ರಸಾರ ಮಾಡುವುದನ್ನು ನಿರ್ಬಂಧಿಸಿದೆ. ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲು ಸರ್ಕಾರವೇ ಅಧಿಕಾರಿಯೊಬ್ಬರನ್ನು ನೇಮಿಸಿದ್ದು, ಅಧಿಕಾರಿ ನಿಡುವ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ಬಗ್ಗೆ ಮಾಧ್ಯಮಗಳು ಮಾಹಿತಿ ನೀಡಬೇಕಾಗುತ್ತದೆ.

ಆದರೆ ಪಂಜಾಬ್ ನ ಸ್ಥಳಿಯ ಮಾಧ್ಯಮಗಳು ಅಧಿಕಾರಿ ನಿಡುವ ಮಾಹಿತಿಗೆ ಕಾಯದೇ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಯಾಚರಣೆಯನ್ನು ನೇರಪ್ರಸಾರ ಮಾಡುತ್ತಿರುವುದು ಗೃಹ ಸಚಿವಾಲಯದ ಗಮನಕ್ಕೆ ಬಂದಿರುವುದರಿಂದ ಸರ್ಕಾರ ಈ ಆದೇಶ ಹೊರಡಿಸಿದೆ.

ಕೇಬಲ್ ಟೆಲಿವಿಶನ್ ನೆಟ್ವರ್ಕ್ (ತಿದ್ದುಪಡಿ ಕಾಯ್ದೆ)ಯನ್ನು ಉಲ್ಲಂಘಿಸಿರುವ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com