ಅಸ್ಸಾಂನಿಂದ ದೆಹಲಿಯತ್ತ ಅಬ್ದುಲ್ ಕಲಾಂರ ಪಾರ್ಥಿವ ಶರೀರ

ನಿನ್ನೆ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಡಾ. ಎಪಿಜೆ ಅಬ್ದುಲ್ ಕಲಾಂರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಗುತ್ತಿದೆ...
ಎಪಿಜೆ ಅಬ್ದುಲ್ ಕಲಾಂ
ಎಪಿಜೆ ಅಬ್ದುಲ್ ಕಲಾಂ

ಗುವಾಹಟಿ(ಅಸ್ಸಾಂ): ನಿನ್ನೆ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಡಾ. ಎಪಿಜೆ ಅಬ್ದುಲ್ ಕಲಾಂರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಗುತ್ತಿದೆ.

ಅಸ್ಸಾಂನ ಗುವಾಹಟಿಯಲ್ಲಿ ಅಬ್ದುಲ್ ಕಲಾಂಗೆ ಸೇನಾ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದ್ದರು. ಬಳಿಕ ವಿಶೇಷಾ ವಿಮಾನದಲ್ಲಿ ಕಲಾಂರ ಪಾರ್ಥಿವ ಶರೀರವನ್ನು ದೆಹಲಿಗೆ ರವಾನಿಸಿದ್ದು, ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 11.45ರ ಸುಮಾರಿಗೆ ಬರುವ ಸಾಧ್ಯತೆ ಇದೆ.

83 ವರ್ಷದ ಅಬ್ದುಲ್ ಕಲಾಂ ನಿನ್ನೆ ಶಿಲ್ಲಾಂಗ್ ನ ಐಐಎಂ ನಲ್ಲಿ ಉಪನ್ಯಾಸ ನೀಡುತ್ತಿರಬೇಕಾದರೆ ಏಕಾಏಕಿ ಕುಸಿದುಬಿದ್ದಿದ್ದರು. ಈ ವೇಳೆ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ಕೂಡಲೇ ಅವರನ್ನು ಶಿಲ್ಲಾಂಗ್ ನ ಬೆಥೇನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com