ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯವಲ್ಲ: ಕೇಂದ್ರ ಸ್ಪಷ್ಟನೆ

ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ...
ಆಧಾರ್
ಆಧಾರ್

ನವದೆಹಲಿ: ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ವಿವಿಧ ಸರ್ಕಾರಿ ಯೋಜನೆ ಹಾಗೂ ನೋಂದಣಿ ಪ್ರಕ್ರಿಯೆಗಳಿಗೆ ಕೆಲವು ರಾಜ್ಯಗಳಲ್ಲಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆಯಿಂದ ಪಾರಾಗುವ ಯತ್ನವಾಗಿ ಕೇಂದ್ರ ಗುರುವಾರ ಸುಪ್ರೀಂಗೆ ಈ ಸ್ಪಷ್ಟನೆ ನೀಡಿದೆ.

ಕೇಂದ್ರದ ಪರ ಅಡಿಷನಲ್ ಸಾಲಿ ಸಿಟರ್ ಜನರಲ್ ಪಿಂಕಿ ಆನಂದ್ ಕೋರ್ಟಿಗೆ ಹಾಜರಾಗಿ, ಕೋರ್ಟಿನ ಹಿಂದಿನ ಆದೇಶದಂತೆ ಯಾವುದೇ ಸರ್ಕಾರಿ ಉದ್ದೇಶಕ್ಕೆ ಆಧಾರ್ ಕಡ್ಡಾಯಗೊಳಿಸದಂತೆ ಸೂಚಿಸಿದೆ ಎಂದು ಮೂವರು ನ್ಯಾಯಮೂರ್ತಿಗಳ ಪೀಠಕ್ಕೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com