ಜಮ್ಮು- ಕಾಶ್ಮೀರ ವಿವಾದಿತ ಪ್ರದೇಶ: ಪಾಕ್ ಸೇನಾ ಮುಖ್ಯಸ್ಥ

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತವನ್ನು ಕೆಣಕುವ ಸಾಹಸ ಮಾಡಿದೆ. ``ಕಾಶ್ಮೀರ ವಿವಾದಿತ ಪ್ರದೇಶ'' ಎಂದು ಪಾಕ್ ಸೇನಾ ಮುಖ್ಯಸ್ಥ ...
ರಹೀಲ್ ಷರೀಫ್
ರಹೀಲ್ ಷರೀಫ್
Updated on

ಇಸ್ಲಾಮಾಬಾದ್/ನವದೆಹಲಿ: ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತವನ್ನು ಕೆಣಕುವ ಸಾಹಸ ಮಾಡಿದೆ. ``ಕಾಶ್ಮೀರ ವಿವಾದಿತ ಪ್ರದೇಶ'' ಎಂದು ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದಾರೆ. ಜತೆಗೆ, ಈ ವಿವಾದವನ್ನು ವಿಶ್ವಸಂಸ್ಥೆಯ ನಿರ್ಣಯದಂತೆ ಪರಿಹರಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪಾಕ್ ಹಾಗೂ ಕಾಶ್ಮೀರವನ್ನು ಪ್ರತ್ಯೇಕಿಸುವುದು ಅಸಾಧ್ಯ. ಕಾಶ್ಮೀರಿಗರ ಆಶಯ ಹಾಗೂ ವಿಶ್ವಸಂಸ್ಥೆಯ ನಿರ್ಣಯದಂತೆ ಕ್ರಮ ಕೈಗೊಂಡಾಗ ಮಾತ್ರ ಈ ಭಾಗದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಐಎಸ್‍ಐನ ಸಾರ್ವಜನಿಕ ಸಂಪರ್ಕಗಳ ಮಹಾ ನಿರ್ದೇಶಕ ಮೇಜರ್ ಜನರಲ್ ಆಸಿಮ್ ಸಲೀಮ್ ಬಜ್ವಾ ಸೇನಾ ಮುಖ್ಯಸ್ಥ ರಹೀಲ್ ಷರೀಫ್ ಹೇಳಿಕೆಯನ್ನಾಧರಿಸಿ ಟ್ವೀಟ್ ಮಾಡಿದ್ದಾರೆ. ಸೌಹಾರ್ದ ಸಂಬಂಧ ಬೇಕು: ಪಾಕ್ ಸೇನಾ ಮುಖ್ಯಸ್ಥ ಜ.ರಹೀಲ್ಕಾಶ್ಮೀರ ವಿವಾದಿತ ಪ್ರದೇಶ ಎಂದು ವಿವಾದ ಎಬ್ಬಿಸಿದ್ದರೆ ಪ್ರಧಾನಿ ನವಾಜ್ ಷರೀಫ್ ಭಾರತ ಜತೆ ಸೌಹಾರ್ದ ಸಂಬಂಧ ಕಾಯ್ದುಕೊಳ್ಳುವುದು ತಮ್ಮ ಸರ್ಕಾರದ ಆದ್ಯತೆ ಎಂದಿದ್ದಾರೆ. ಆಯಾ ರಾಷ್ಟ್ರಗಳ ಸಾರ್ವಭೌಮತ್ವ ಗಮನದಲ್ಲಿಟ್ಟುಕೊಂಡು 2 ದೇಶಗಳು ಸಂಬಂಧ ಸುಧಾರಿಸಿಕೊಳ್ಳಬೇಕು ಎಂದಿದ್ದಾರೆ ಷರೀಫ್. ಗಡಿ ನಿಯಂತ್ರಣ ರೇಖೆಯಲ್ಲಿ ಕಳೆದ ಮೂರು ದಿನಗಳಿಂದ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕಿಸ್ತಾನ ಮಂಗಳವಾರವಷ್ಟೇ ಇದಕ್ಕೆ ಭಾರತವೇ ಕಾರಣ ಎಂದು ಆರೋಪಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com