ವಾರಾಣಸಿ ಭೇಟಿಗೆ ರಾಹುಲ್ ನಿರ್ಧಾರ

ಕೇಂದ್ರ ಸರ್ಕಾರದ ವಿರುದ್ಧ ಮಾತಿನ ಯುದ್ಧ ನಡೆಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರ ಕ್ಷೇತ್ರ ವಾರಾಣಸಿ ಭೇಟಿ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
Updated on

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಮಾತಿನ ಯುದ್ಧ ನಡೆಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರ ಕ್ಷೇತ್ರ ವಾರಾಣಸಿ ಭೇಟಿ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

ಈ ಬಗ್ಗೆ ದೆಹಲಿಯ ಕಾಂಗ್ರೆಸ್ ನಾಯಕರು ಈ ವಿಷಯದ ಬಗ್ಗೆ ತುಟಿಪಿಟಿಕೆನ್ನುತ್ತಿಲ್ಲ. ಆದರೆ ಪಕ್ಷದ ಉತ್ತರ ಪ್ರದೇಶದ ಘಟಕವು ಪ್ರಧಾನಿ ಅವರ ಕ್ಷೇತ್ರಕ್ಕೆ ರಾಹುಲ್ ಭೇಟಿಗೆ ಯೋಜನೆ ರೂಪಿಸುತ್ತಿದೆ.

ಅಕಾಲಿಕ ಮಳೆ ಹಾಗೂ ಆಲಿಕಲ್ಲು ಮಳೆಯಿಂದಾಗಿ ಬೆಳೆ ನಾಶದಿಂದ ತೊಂದರೆಗೀ ಡಾಗಿರುವ ರೈತರನ್ನು ಭೇಟಿಯಾಗಲು ರಾಹುಲ್ ಯೋಜಿಸಿದ್ದಾರೆ. ಪ್ರಧಾನಿ ಕ್ಷೇತ್ರದ ಜನರನ್ನು ಒಲಿಸಿ ಕೊಳ್ಳಲು ಕಾಂಗ್ರೆಸ್ ಉಪಾಧ್ಯಕ್ಷ ಭಾರೀ ಯೋಜನೆ ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com