ನವದೆಹಲಿ:ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಜೂನ್ 9ಕ್ಕೆ ಕರೆದಿದ್ದಾರೆ.
ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಕಾಂಗ್ರೆಸ್ ಆಡಳಿತವಿರವ ರಾಜ್ಯ ಗಳಲ್ಲಿ ನಡೆಸುತ್ತಿರುವ ರಾಜಕೀಯ ಕಾರ್ಯತಂತ್ರಕ್ಕೆ ಪ್ರತಿ ಕಾರ್ಯತಂತ್ರ ರೂಪಿಸುವ ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಹಿರಿಯ ಮುಖಂಡರು, ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.
ಪ್ರಸ್ತುತ ಕಾಂಗ್ರೆಸ್ ಕೇರಳ, ಅಸ್ಸಾಂ,ಕರ್ನಾಟಕ,ಹಿಮಾಚಲ ಪ್ರದೇಶ, ಉತ್ತರಾಖಂಡ್, ಅರುಣಾಚಲ ಪ್ರದೇಶ,ಮೇಘಾಲಯ, ಮಿಜೋರಾಂ ಮತ್ತು ಮಣಿಪುರ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದು, ಕೇರಳ ಹಾಗೂ ಅಸ್ಸಾಂನಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.
ಕಳೆದ ವರ್ಷ ಲೋಕಸಭಾ ಚುನಾವಣೆ ನಡೆದ ನಂತರ ಕಾಂಗ್ರೆಸ್ ಹೈಕಮಾಂಡ್ ಕರೆದಿರುವ ಮೊದಲ ಸಭೆ ಇದಾಗಿದೆ.
Advertisement