ಆರ್. ಕೆ. ನಗರದಿಂದ ಜಯಲಲಿತಾ ನಾಮಪತ್ರ ಸಲ್ಲಿಕೆ

ಜೂನ್ 27 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಆರ್ .ಕೆ ನಗರ ವಿಧಾನ ಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಜಯಲಲಿತಾ
ಜಯಲಲಿತಾ
Updated on

ಚೆನ್ನೈ : ಜೂನ್ 27 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಆರ್ .ಕೆ ನಗರ ವಿಧಾನ ಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಎರಡು ವಾರಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣವಚನ ಸ್ವೀಕರಿಸಿದ್ದರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದ ಜಯಲಲಿತಾ ಸಿಎಂ ಹುದ್ದೆಯಿಂದ ಕೆಳಗಿಳಿದಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರಾಗೃಹ ವಾಸ ಮಾಡಿದ್ದರು.

ನಂತರ ಕರ್ನಾಟಕ ಹೈ ಕೋರ್ಟ್ ಜಯಲಲಿತಾ ನಿರಪರಾಧಿ ಎಂದು ಕ್ಲೀನ್ ಚಿಟ್ ನೀಡಿತ್ತು. ನಂತರ ಜಯಲಲಿತಾ ಮೇ 23 ರಂದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇದಾದ ನಂತರ ಶಾಸಕ ಪಿ. ವಟ್ರಿವೇಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್.ಕೆ ನಗರ ವಿಧಾನಸಭಾ ಕ್ಷೇತ್ರವನ್ನು ಜಯಲಲಿತಾಗಾಗಿ ತೆರವುಗೊಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com