ಲಖನೌ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರ ವಾರಣಾಸಿಯ ಇರಿಗೇಷನ್ ಕಾಲೋನಿಯಲ್ಲಿ ಸ್ಪೋಟವೊಂದು ಸಂಭವಿಸಿರುವುದಾಗಿ ಸೋಮವಾರ ತಿಳಿದುಬಂದಿದೆ.
ವಾರಣಾಸಿಯಲ್ಲಿರುವ ಇರಿಗೇಷನ್ ಕಾಲೋನಿಯ ತ್ಯಾಜ್ಯ ಘಟಕದಲ್ಲಿ ಇಂದು ಬೆಳಿಗ್ಗೆ ಸ್ಫೋಟವೊಂದು ಸಂಭವಿಸಿದ್ದು, ಘಟನೆಯಲ್ಲಿ ಸಾವು, ನೋವು ಸಂಭವಿಸಿರುವುದಾಗಿ ವರದಿಯಾಗಿಲ್ಲ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಪೋಟದಿಂದ ಗಾಬರಿಯಾಗುವ ಅಗತ್ಯವಿಲ್ಲ. ಸ್ಪೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ತನಿಖೆ ಮುಂದುವರೆಯುತ್ತಿದ್ದು, ತನಿಖೆಯ ನಂತರವಷ್ಟೇ ಪ್ರಮುಖ ಕಾರಣ ತಿಳಿದು ಬರಲಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತ್ಯಾಜ್ಯ ಘಟಕದಲ್ಲಿ ರಾಸಾಯನಿಕ ಪದಾರ್ಥ ಅಥವಾ ಕಸದ ಕೆಳಗೆ ಇತರೆ ತಾಪದ ವಸ್ತುಗಳಿರುವುದರಿಂದ ಸ್ಫೋಟ ಸಂಭವವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
Advertisement