ಅರ್ಜಿ ವಿಚಾರಣೆಗೆ ನಕಾರ

ದ್ವೇಷಪೂರಿತ ಭಾಷಣಕ್ಕೆ ಸಂಬಂಧಿಸಿದ ಜಾಮೀನುರಹಿತ ವಾರಂಟ್ ಅನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ...
ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ದ್ವೇಷಪೂರಿತ ಭಾಷಣಕ್ಕೆ ಸಂಬಂಧಿಸಿದ ಜಾಮೀನುರಹಿತ ವಾರಂಟ್ ಅನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಸುಪ್ರೀಂ
ಕೋರ್ಟ್ ಪೀಠ ಹಿಂದೆ ಸರಿದಿದೆ. ದ್ವೇಷಪೂರಿತ ಭಾಷಣ ಆರೋಪಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗದ್ದಕ್ಕೆ ಅಸ್ಸಾಂನ ವಿಚಾ ರಣಾ ನ್ಯಾಯಾಲಯವು ಸ್ವಾಮಿಗೆ ಜಾಮೀ ನುರಹಿತ ವಾರಂಟ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಮೆಟ್ಟಿ ಲೇರಿದ್ದರು. ಆದರೆ ಅರ್ಜಿ ವಿಚಾರಣೆಗೆ ನಿರಾಕರಿಸಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್.ಕೆ.ಅಗರ್ವಾಲ್ ನೇತೃತ್ವದ ಪೀಠ,ಅರ್ಜಿಯನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com