ವಿಶಾಖಪಟ್ಟಣ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣಿಕೆ: 40 ಕೆಜಿ ಚಿನ್ನ ವಶ

ವಿಶಾಖಪಟ್ಟಣದ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣಿಕೆ ಮಾಡುತ್ತಿದ್ದ 40 ಕೆಜಿ ಚಿನ್ನವನ್ನು ಕೇಂದ್ರದ ತೆರಿಗೆ ಇಲಾಖೆ ತನಿಖಾಧಿಕಾರಿಗಳು...
ಬಂಗಾರ  (ಸಾಂದರ್ಭಿಕ ಚಿತ್ರ)
ಬಂಗಾರ (ಸಾಂದರ್ಭಿಕ ಚಿತ್ರ)
Updated on

ವಿಶಾಖಪಟ್ಟಣ: ವಿಶಾಖಪಟ್ಟಣದ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣಿಕೆ ಮಾಡುತ್ತಿದ್ದ 40 ಕೆಜಿ ಚಿನ್ನವನ್ನು ಕೇಂದ್ರದ ತೆರಿಗೆ ಇಲಾಖೆ ತನಿಖಾಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.
ದುಬೈನಿಂದ ಬಂದಿಳಿದ ಮೂರು ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಪರಿಶೀಲನೆ ನಡೆಸುವ ವೇಳೆ ಕಳ್ಳ ಸಾಗಣಿಕೆ ಮಾಡುತ್ತಿದ್ದ ಚಿನ್ನ ಸೋಮವಾರ ಪತ್ತೆಯಾಗಿದೆ. ಇಷ್ಟೊಂದು ಚಿನ್ನ ವಶ ಪಡಿಸಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ.

ಕಳ್ಳಸಾಗಣಿಕೆ ಕೃತ್ಯಕ್ಕೆ ಸಂಬಂಧಿಸಿದಂತೆ ಒಟ್ಟು 50 ಮಂದಿಯನ್ನು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. 50 ಮಂದಿ ಸಿಂಗಾಪೂರ್ ಮತ್ತು ಮಲೇಷ್ಯಾದಿಂದ ಮೂರು ವಿಮಾನಗಳಲ್ಲಿ ಬಂದಿಳಿಯುತ್ತಾರೆ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದ ಕಾರಣ ತನಿಖಾಧಿಕಾರಿಗಳು ಕಟ್ಟು ನಿಟ್ಟಿನ ಪರಿಶೀಲನೆ ನಡೆಸಿದ್ದರು.

ಪ್ರಯಾಣಿಕರ ಲಗೇಜ್ ನಲ್ಲಿ ಮನೆ ಬಳಕೆಯ ವಸ್ತುಗಳ ನಡುವೆ, ಮೊಬೈಲ್ ಫೋನ್‌ಗಳ ನಡುವೆ ಬಚ್ಚಿಟ್ಟು ಕಳ್ಳ ಸಾಗಣಿಕೆ ಮಾಡಲು ಯತ್ನಿಸಲಾಗಿತ್ತು.

ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ ಎಂಬುದರ ಬಗ್ಗೆ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com