ಮಹಾರಾಷ್ಟ್ರದಲ್ಲಿ ಬಸ್‌ಗೆ ಕಂಟೇನರ್ ಡಿಕ್ಕಿ: 20 ಸಾವು

ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯಲ್ಲಿ ಬಸ್ ಮತ್ತು ಕಂಟೇನರ್ ಪರಸ್ಪರ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ 20 ಮಂದಿ ಸಾವಿಗೀಡಾಗಿದ್ದಾರೆ...
ಅಪಘಾತ (ಸಾಂದರ್ಭಿಕ ಚಿತ್ರ)
ಅಪಘಾತ (ಸಾಂದರ್ಭಿಕ ಚಿತ್ರ)

ಮುಂಬೈ: ಮಹಾರಾಷ್ಟ್ರದ ಜಲ್‌ಗಾಂವ್ ಜಿಲ್ಲೆಯಲ್ಲಿ ಬಸ್ ಮತ್ತು ಕಂಟೇನರ್ ಪರಸ್ಪರ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ 20 ಮಂದಿ ಸಾವಿಗೀಡಾಗಿದ್ದಾರೆ. 15 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.

ಧುಲೇ- ಚಾಲೀಸ್‌ಗಾಂವ್ ಹೈವೇಯಲ್ಲಿ ಗುರುವಾರ ಮಧ್ಯಾಹ್ನ  2.30ಕ್ಕೆ ಈ ಭೀಕರ ಅಪಘಾತ ಸಂಭವಿಸಿದೆ.

ಅಧಿಕ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ  ಸೂರತ್ ನಿಂದ ಚಾಲೀಸ್ ಗಾಂವ್‌ಗೆ ಹೋಗುತ್ತಿದ್ದ ಮಹಾರಾಷ್ಟ್ರ ಸ್ಟೇಟ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಬಸ್ ವಿರುದ್ಧ ದಿಶೆಯಿಂದ ಬರುತ್ತಿದ್ದ ಕಂಟೇನರ್‌ಗೆ ಡಿಕ್ಕಿ ಹೊಡೆದಿತ್ತು. ಎರಡೂ ವಾಹನದ ಚಾಲಕರು ಸ್ಥಳದಲ್ಲೇ ಮೃತರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com